ಕೆಎಸ್ ಆರ್ ಟಿಸಿ ಬಸ್ ಡಿಕ್ಕಿ: ರೇಷನ್ ಅಕ್ಕಿ ತರಲು ತೆರಳುತ್ತಿದ್ದ ತಂದೆ ಮಗ ಸ್ಥಳದಲ್ಲೇ ಸಾವು..

ಮೈಸೂರು,ಡಿ,8,2019(www.justkannada.in): ಕೆ.ಎಸ್.ಆರ್.ಟಿ.ಸಿ.ಬಸ್ ಹಾಗೂ ಸ್ಕೂಟರ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಅಪ್ಪ ಮಗ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.

ಮೈಸೂರು ತಾಲೂಕಿನ ಕೋಟೆಹುಂಡಿ ಸರ್ಕಲ್ ಬಳಿ ಈ ಘಟನೆ ನಡೆದಿದೆ.  ಪ್ರಕಾಶ್ (50) ಸುರೇಶ್(23) ಮೃತಪಟ್ಟ ಅಪ್ಪಮಗ ಮೃತರು ಕಟ್ಟೆಹುಣಸೂರು ನಿವಾಸಿಗಳಾಗಿದ್ದು ಮೈಸೂರಿನ ಜೆ.ಪಿ.ನಗರದ ಮಹದೇವುಪರದಲ್ಲಿ ವಾಸವಿದ್ದರು.

ಪ್ರಕಾಶ್ ಮತ್ತು ಸುರೇಶ್ ರೇಷನ್ ಅಕ್ಕಿಗಾಗಿ ಥಂಬ್ ಇಂಪ್ರೆಷನ್ ಕೊಡಲು ಕಟ್ಟೆಹುಣಸೂರಿಗೆ ಡಿಯೋ ಸ್ಕೂಟರ್ ನಲ್ಲಿ ತೆರಳುತ್ತಿದ್ದರು. ಈ ವೇಳೆ ಯಮಸ್ವರೂಪಿಯಾಗಿ ಬಂದ ಕೆಎಸ್ ಆರ್ ಟಿಸಿ ಬಸ್ ಸ್ಕೂಟರ್ ಗೆ ಡಿಕ್ಕಿಯಾಗಿ ಈ ದುರ್ಘಟನೆ ನಡೆದಿದೆ. ಮೈಸೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Key words: mysore-KSR TC bus- collision –Father- son- dies- on the spot