ಮೈಸೂರು,ಜುಲೈ,25,2025 (www.justkannada.in): ಇ- ಸ್ವತ್ತು, ಇ- ಖಾತೆ ಮಾಡಿಕೊಡಲು ಲಂಚ ಕೇಳುತ್ತಿದ್ದ ಆರೋಪ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಏಕಕಾಲಕ್ಕೆ ಹತ್ತು ಕಡೆಗಳಲ್ಲಿ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ದಾಖಲೆ ಪರಿಶೀಲನೆ ನಡೆಸಿದ್ದಾರೆ.
ಮೈಸೂರಿನಲ್ಲಿ ಇ- ಸ್ವತ್ತು ಕೊಡಲು ಅಧಿಕಾರಿಗಳು ಸತಾಯಿಸುತ್ತಿದ್ದು, ಜನರಿಂದ ಹಣ ಸುಲಿಗೆಗೆ ಇಳಿದಿದ್ದರು ಎಂಬ ಆರೋಪ ಕೇಳಿ ಬಂದಿದೆ. ಈ ಹಿನ್ನೆಲೆಯಲ್ಲಿ ಹೂಟಗಳ್ಳಿ ಪಂಚಾಯತ್, ಬೋಗಾದಿ ಪಂಚಾಯತ್, ರಮ್ಮನಹಳ್ಳಿ ಪಟ್ಟಣ ಪಂಚಾಯಿತಿ, ಶ್ರೀರಾಂಪುರ ಪಟ್ಟಣ ಪಂಚಾಯಿತಿ, ಕಡಕೊಳ ಪಟ್ಟಣ ಪಂಚಾಯಿತಿ ಹಾಗೂ ವಲಯ ಕಚೇರಿ 2, 3 , 7, 8, 9 ರಲ್ಲಿ ಲೋಕಾಯುಕ್ತ ದಾಳಿ ನಡೆಸಲಾಗಿದೆ.

ಲೋಕಾಯುಕ್ತ ಎಸ್ಪಿ ಉದೇಶ್ ನೇತೃತ್ವದಲ್ಲಿ ದಾಳಿಯಾಗಿದ್ದು, ಎಲ್ಲಾ ಕಚೇರಿಗಳ ಮುಖ್ಯ ಅಧಿಕಾರಿಗಳು, ಪಟ್ಟಣ ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ತರಾಟೆ ತೆಗೆದುಕೊಂಡರು. ದಾಳಿ ನಡೆಸಿರುವ ಲೋಕಾಯುಕ್ತ ಅಧಿಕಾರಿಗಳು ದಾಖಲೆ, ಕಡತಗಳ ಪರಿಶೀಲನೆಯಲ್ಲಿ ತೊಡಗಿಕೊಂಡಿದ್ದಾರೆ.
Key words: Mysore, Lokayukta, raids, inspects