Thursday, August 13, 2026

BDA Apartments

Home Front Page ಹಿಂದೂ ದೇವಾಲಯ ತೆರವು ಕ್ರಮ ಸರಿಯಿಲ್ಲ ಎಂಬ ಪ್ರತಾಪ್ ಸಿಂಹ ಹೇಳಿಕೆ ಬಗ್ಗೆ ಶಾಸಕ ಎಸ್.ಎ...

ಹಿಂದೂ ದೇವಾಲಯ ತೆರವು ಕ್ರಮ ಸರಿಯಿಲ್ಲ ಎಂಬ ಪ್ರತಾಪ್ ಸಿಂಹ ಹೇಳಿಕೆ ಬಗ್ಗೆ ಶಾಸಕ ಎಸ್.ಎ ರಾಮದಾಸ್ ಪ್ರತಿಕ್ರಿಯಿಸಿದ್ದು ಹೀಗೆ..?

ಮೈಸೂರು,ಸೆಪ್ಟಂಬರ್,11,2021(www.justkannada.in): ಹಿಂದೂ ದೇವಸ್ಥಾನ ತೆರವು  ಕ್ರಮ ಸರಿಯಲ್ಲ ಎಂಬ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಹೇಳಿಕೆ ಕುರಿತು ಪ್ರತಿಕ್ರಿಯಿಸಿರುವ ಶಾಸಕ ಎಸ್.ಎ ರಾಮದಾಸ್, ಅವರ ಅಭಿಪ್ರಾಯ ಬೇರೆ, ನನ್ನ ಅಭಿಪ್ರಾಯ ಬೇರೆ. ಸುಪ್ರೀಂ ಕೋರ್ಟ್‌ ಸೂಚನೆಯಂತೆ ಕ್ರಮ ಜರುಗುತ್ತಿದೆ ಎಂದು ತಿಳಿಸಿದ್ದಾರೆ.

ಮೈಸೂರಿನಲ್ಲಿ ಈ ಬಗ್ಗೆ ಮಾತನಾಡಿದ ಶಾಸಕ ಎಸ್.ಎ ರಾಮದಾಸ್, ಹಿಂದೂ ದೇವಾಲಯಗಳನ್ನ ಏಕಾಏಕಿ ತೆರವು ಮಾಡುತ್ತಿಲ್ಲ. ಮೊದಲು ಅದನ್ನ ಉಳಿಸಿಕೊಳ್ಳುವ ಯೋಚನೆ‌ ಮಾಡಲಾಗುತ್ತಿದೆ. ಎರಡನೇ ಹಂತದಲ್ಲಿ ಸ್ಥಳಾಂತರಕ್ಕೆ ಚಿಂತನೆ ಇದೆ. ಇದೆರಡು ಸಾಧ್ಯವಾಗದಿದ್ದಾಗ ಅದನ್ನ ತೆರವು ಮಾಡಲಾಗುತ್ತಿದೆ. ಇದರಲ್ಲಿ ಆ ಧರ್ಮದ್ದು ಈ ಧರ್ಮದ್ದು ಎಂಬುದು ಏನು ಇಲ್ಲ ಎಂದರು.

ನಾವು ಆದಷ್ಟು ಎಲ್ಲ ಧಾರ್ಮಿಕ ಕೇಂದ್ರಗಳನ್ನು ಉಳಿಸಿಕೊಳ್ಳುವ ಸ್ಥಳಾಂತರ ಮಾಡುವ ಚಿಂತನೆ ಇದೆ. ಈ ವಿಚಾರದ ಬಗ್ಗೆ ಸಿಎಂ ಅವರ ಗಮನಕ್ಕೂ ತರುತ್ತೇನೆ. ಇದರಲ್ಲಿ ಒಂದು ಕ್ಷೇತ್ರ ಒಂದು ಧರ್ಮ ಎಂಬುವ ವಿಚಾರ ಇರುವುದಿಲ್ಲ ಎಂದು ಶಾಸಕ ಎಸ್.ಎ ರಾಮದಾಸ್ ತಿಳಿಸಿದರು.

Key words: mysore- MLA -SA Ramadas -reacts –MP-Pratap simha -Hindu Temple