ಕ್ಲುಲಕ್ಕ ಕಾರಣಕ್ಕೆ ಗಲಾಟೆ: ಗಂಭೀರವಾಗಿ ಗಾಯಗೊಂಡಿದ್ದ ವ್ಯಕ್ತಿ ಸಾವು….

ಮೈಸೂರು,ಆ,27,2020(www.justkannada.in): ಕ್ಲುಲಕ್ಕ ಕಾರಣಕ್ಕೆ ಗಲಾಟೆ ನಡೆದು ಈ ವೇಳೆ ಗಂಭೀರ ಗಾಯಗೊಂಡಿದ್ದ ವ್ಯಕ್ತಿ ಸಾವನ್ನಪ್ಪಿರುವ ಘಟನೆ ಮೈಸೂರಿನಲ್ಲಿ ನಡೆದಿದೆ.jk-logo-justkannada-logo

ಮೈಸೂರಿನ ಬಿಎಂಶ್ರೀ ನಗರದಲ್ಲಿ ಈ ಘಟನೆ ನಡೆದಿದೆ. ಸೋಮಶೇಖರ್ ಮೃತ ವ್ಯಕ್ತಿ. ಸೋಮಶೇಖರ್ ವೃತ್ತಿಯಲ್ಲಿ ಆಟೋ ಚಾಲಕನಾಗಿದ್ದು, ರಾತ್ರಿ ತೋಟದ ಮನೆಗೆ ತೆರಳುತ್ತಿದ್ದಾಗ ಈ ಘಟನೆ ಸಂಭವಿಸಿದೆ. ರೌಡಿ ಶೀಟರ್ ಸತ್ಯ ಗ್ಯಾಂಗ್ ನಿಂದ ಹಲ್ಲೆ ಮಾಡಿರುವ ಆರೋಪ ಕೇಳಿಬಂದಿದೆ.

ಮುಖಕ್ಕೆ ಟಾರ್ಚ್ ಲೈಟ್ ಬಿಟ್ಟಿದ್ದಾರೆ ಎಂಬ ಕ್ಷುಲಕ ಕಾರಣಕ್ಕೆ ಗಲಾಟೆ ನಡೆದಿದ್ದು ಈ ವೇಳೆ ಸೋಮಶೇಖರ್ ಗೆ ಆರೋಪಿಗಳು ಚಾಕು ಇರಿದು ಪರಾರಿಯಾಗಿದ್ದಾರೆ.  ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಸೋಮಶೇಖರ್ ನನ್ನು ಸ್ಥಳೀಯರು ಆಸ್ಪತ್ರೆಗೆ ದಾಖಲಿಸಿದ್ದರು. ಆದರೆ ಚಿಕಿತ್ಸೆ ಫಲಿಸದೆ ಸೋಮಶೇಖರ್ ಮೃತಪಟ್ಟಿದ್ದಾರೆ.mysore- roit-death - man -death

ಈ ಕುರಿತು ಮೇಟಗಳ್ಳಿ ಪೋಲಿಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.  ಇನ್ನು ಘಟನೆ ಬಳಿಕ ಆರೋಪಿಗಳು ತಲೆಮರಿಸಿಕೊಂಡಿದ್ದು, ಆರೋಪಿ ಪತ್ತೆಗೆ ಮೇಟಗಳ್ಳಿ ಠಾಣಾ ಪೊಲೀಸರು ಬಲೆ ಬೀಸಿದ್ದಾರೆ.

Key words: mysore- roit-death – man -death