ಈಶ್ವರಪ್ಪನ್ನ ಸರ್ಟಿಫಿಕೇಟ್ ಬೇಕಾ.? ಇದಕ್ಕೆ‌ ಜನರು ಉತ್ತರ ಕೊಡ್ತಾರೆ : ಸಿದ್ದರಾಮಯ್ಯ

 

ಮೈಸೂರು, ಆ.10, 2021 : (www.justkannada.in news ) ಈಶ್ವರಪ್ಪನಿಗೆ ಸಂಸ್ಕಾರ, ಸಂಸ್ಕೃತಿಯೇ ಗೊತ್ತಿಲ್ಲ. ಯಾರು ಬೇಕಾದರೂ ಅವ್ರು ಬಳಸಿರುವ ಪದವನ್ನು ಬಳಸಬಹುದು.

ಕಾಂಗ್ರೆಸ್ ವಿರುದ್ಧ ಕೆ‌.ಎಸ್ ಈಶ್ವರಪ್ಪ ಅವಾಚ್ಯ ಶಬ್ದ ಬಳಕೆ ವಿಚಾರ. ಮೈಸೂರಿನಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರತಿಕ್ರಿಯಿಸಿದ್ದು ಹೀಗೆ..

ಸಂಸ್ಕಾರ ಇರುವವರು ಅಂತಹ ಪದವನ್ನು ಬಯಸುವುದಿಲ್ಲ. ಈಶ್ವರಪ್ಪ ಬೆಳೆದು ಬಂದಿರುವ ಹಾದಿಯೇ ಹಾಗಿದೆ. ಅವ್ರಿಂದ ಬದಲಾವಣೆಗಳನ್ನು ನಿರೀಕ್ಷೆ ಮಾಡಲೇಬಾರದು‌. ಆಡಳಿತದಲ್ಲಿರುವವರು ಟೀಕೆಗಳನ್ನ ಆರೋಗ್ಯ ಪೂರ್ಣವಾಗಿ ಸ್ವೀಕರಿಸಬೇಕು. ರಾಜಕಾರಣದಲ್ಲಿ ಟೀಕೆ ಬರುವುದು ಸಹಜ. ಅದಕ್ಕೆ ಈ ರೀತಿ ಪ್ರತಿಕ್ರಿಯೆ ನಿಡೋದು ಸರಿಯಲ್ಲ. ಈಶ್ವರಪ್ಪ ಮೊದಲಿನಿಂದಲೂ ಹೀಗೆಯೇ ಮಾತ್ನಾಡುತ್ತಿದ್ದಾರೆ. ಅವರಿಗೆ ಆರೋಗ್ಯಕರವಾದ ಸಂಸ್ಕೃತಿಯೇ ಇಲ್ಲ. ಬಿಜೆಪಿಯವರ ಸಂಸ್ಕೃತಿಯೇ ಇಂತದ್ದು. ಈಶ್ವರಪ್ಪರಿಗೆ ಬಿಜೆಪಿ ಬುದ್ದಿ ಹೇಳುವ ಕೆಲಸ ಮಾಡುತ್ತಿಲ್ಲ. ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ.

selected,cities,Night curfew,Corona,drive,Striking,tray,Just,action,Childish,Former CM,Siddaramaiah 

ಸಿದ್ದರಾಮಯ್ಯ ಇಲಿ ಎಂಬ ಈಶ್ವರಪ್ಪ ಹೇಳಿಕೆ ವಿಚಾರ.

ನಾನು ಇಲಿಯಾ, ಹುಲಿಯಾ, ಮನ್ನುಷ್ಯನ ಎಂದು ತೀರ್ಮಾನ ಮಾಡಬೇಕಾದವರು ಜನ. ಇದಕ್ಕೆ ಈಶ್ವರಪ್ಪನ್ನ ಸರ್ಟಿಫಿಕೇಟ್ ಬೇಕಾ.? ಇದಕ್ಕೆ‌ ಜನರು ಉತ್ತರ ಕೊಡ್ತಾರೆ, ಈಶ್ವರಪ್ಪ ಸರ್ಟಿಫಿಕೇಟ್ ಬೇಕಾಗಿಲ್ಲ. ಮೈಸೂರಿನಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆ.

ಸಭೆಯಲ್ಲಿ ಭಾಗಿಯಾದ ಸಿದ್ದು :

ಮೈಸೂರಿನಲ್ಲಿ ರಾಜ್ಯ ಕುರುಬ ಸಂಘದ ನಿರ್ದೇಶಕರ ಸಭೆ. ಮೈಸೂರಿನ ಖಾಸಗಿ ಹೋಟೆಲ್‌ನಲ್ಲಿ ಸಭೆ. ರಾಜ್ಯದ ಎಲ್ಲಾ ಜಿಲ್ಲೆಗಳ ನಿರ್ದೇಶಕರು ಸಭೆಯಲ್ಲಿ ಭಾಗಿ. ಸಭೆಗೆ ಆಗಮಿಸಿದ ಮಾಜಿ‌ ಸಿಎಂ ಸಿದ್ದರಾಮಯ್ಯ. ಎಲ್ಲಾ ನಿರ್ದೇಶಕರ ಜೊತೆ ಮಾತುಕತೆ ನಡೆಸಿದ ಸಿದ್ದರಾಮಯ್ಯ

key words : Mysore-siddaramaiha-ex-cm-Karnataka-congress