ಮೈಸೂರು: ಗಾಂಜಾ ಸಾಗಿಸುತ್ತಿದ್ದ ಆರೋಪಿಗಳು ಬೈಕ್ ಬಿಟ್ಟು ಪರಾರಿ

ಮೈಸೂರು, ನವೆಂಬರ್ 22, 2023 (www.justkannada.in): ಗಾಂಜಾ ಮಾರಾಟಕ್ಕೆ ಸಾಗಿಸುತ್ತಿದ್ದ ವ್ಯಕ್ತಿಯನ್ನು ಸೆರೆ ಹಿಡಿಯಲು ಮುಂದಾಗಿದ್ದಾಗ ಆತ ಬೈಕ್ ಬಿಟ್ಟು ಪರಾರಿಯಾಗಿರುವ ಘಟನೆ ನಡೆದಿದೆ.

ಮೈಸೂರು ಕೇಂದ್ರ ಕಾರಾಗೃಹದ ದೊಡ್ಡ ಕಾಂಪೌಂಡ್ ಹಿಂಭಾಗದಲ್ಲಿ ಈ ಘಟನೆ ನಡೆದಿದ್ದು, ಆರೋಪಿಗಳ ಬೈಕ್ ಮತ್ತು 100 ಗ್ರಾಂ‌ ಗಾಂಜಾ ವಶಪಡಿಸಿಕೊಳ್ಳಲಾಗಿದೆ.

ಕೇಂದ್ರ ಕಾರಾಗೃಹ ಸಮೀಪ ಬೈಕ್ ನಲ್ಲಿ ಸಂಗ್ರಹಿಸಿಕೊಂಡು ಗಾಂಜಾ‌ ಮಾರಾಟ ಮಾಡಲಾಗುತ್ತಿದೆ ಎನ್ನುವ ಮಾಹಿತಿ ಮೇರೆಗೆ ಅಬಕಾರಿ ಎಸ್ಪಿ ಪಿ.ಮಹೇಶ್ ಕುಮಾರ್ ಮಾರ್ಗದರ್ಶನದಲ್ಲಿ ಉಪ ನಿರೀಕ್ಷಕ ರವಿಕುಮಾರ್ ನೇತೃತ್ವದ ತಂಡ ದಿಢೀರ್ ಕಾರ್ಯಾಚರಣೆ ನಡೆಸಿದಾಗ ಆರೋಪಿಗಳು ಬೈಕ್ ಬಿಟ್ಟು ಪಕ್ಕದ ಸ್ಮಶಾಸಕ್ಕೆ ಹಾರಿ ತಪ್ಪಿಸಿಕೊಂಡಿದ್ದಾರೆ. ಅರೋಪಿಗಳನ್ನು ಬೆನ್ನಟ್ಟಿ ಹಿಡಿಯಲು ಹಿಂಬಾಲಿಸಿದಾಗ ಕಾಂಪೌಂಡ್ ಹಾರಿ ಪರಾರಿಯಾದರೆನ್ನಲಾಗಿದೆ.

ಬೈಕ್ ವಶಪಡಿಸಿಕೊಂಡು ಆರೋಪಿಗಳ ಬಂಧನಕ್ಕೆ ತನಿಖೆ ಕೈಗೊಂಡಿದ್ದಾರೆ. ಬೈಕ್ ಮಾಲೀಕರ ಮಾಹಿತಿ‌ ಪಡೆದು ಆರೋಪಗಳನ್ನು ಬಂಧಿಸಲಾಗುವುದು ಎಂದು ಉಪ ನಿರೀಕ್ಷಕರು ಹೇಳಿದ್ದಾರೆ.