ಮೃಗಾಯಲಕ್ಕೆ ನೆರವಿನ ಹ್ಯಾಟ್ರಿಕ್ : ಇಂದು ಮತ್ತೆ 1.5 ಕೋಟಿ ರೂ. ದೇಣಿಗೆ ನೀಡಿದ ಸಚಿವ S.T.ಸೋಮಶೇಖರ್.

 

ಮೈಸೂರು, ಮೇ 07, 2020 : (www.justkannada.in news ) ಮೈಸೂರು ಜಯಚಾಮರಾಜೇಂದ್ರ ಮೃಗಾಲಯದ ನಿರ್ವಹಣೆಗೋಸ್ಕರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಅವರು 3ನೇ ಹಂತವಾಗಿ ಗುರುವಾರ 21.14 ಲಕ್ಷ ರೂಪಾಯಿ ಚೆಕ್ ಅನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್ ಕುಲಕರ್ಣಿ ಅವರಿಗೆ ಹಸ್ತಾಂತರಿಸಿದರು.

ಇದೇ ವೇಳೆ, ಉಸ್ತುವಾರಿ ಸಚಿವರ ಮನವಿ ಮೇರೆಗೆ ಕೆ.ಆರ್.ಪುರಂ ವಿಧಾನಸಭಾ ಕ್ಷೇತ್ರದ ವತಿಯಿಂದ ನಗರಾಭಿವೃದ್ಧಿ ಸಚಿವ ಬಿ.ಎ. ಬಸವರಾಜು ಅವರು 84 ಲಕ್ಷ ರೂಪಾಯಿ ಚೆಕ್ ಅನ್ನು ಸಚಿವ ಸೋಮಶೇಖರ್ ಅವರ ಮೂಲಕ ಮೃಗಾಲಯಕ್ಕೆ ಹಸ್ತಾಂತರಿಸಿದರು. ಈ ಮೂಲಕ ಗುರುವಾರ ಒಂದೇ ದಿನ ಮೃಗಾಲಯಕ್ಕೆ ಒಟ್ಟಾರೆ 1,05,14,000 ರೂಪಾಯಿಯನ್ನು ದೇಣಿಗೆಯಾಗಿ ನೀಡಿದಂತಾಗಿದೆ.

 mysore-zoo-donation-somashekar-minister-karnataka
ಒಟ್ಟಾರೆ 2.32 ಕೋಟಿ ರೂ. ಕೊಡುಗೆ

ಉಸ್ತುವಾರಿ ಸಚಿವರಾದ ಸೋಮಶೇಖರ್ ಅವರು ಇದುವರೆಗೆ ತಮ್ಮ ಕ್ಷೇತ್ರ ಹಾಗೂ ಇತರ ಸಚಿವರಿಂದ ಮೃಗಾಲಯಕ್ಕೆ ಒಟ್ಟಾರೆಯಾಗಿ 2,31,60,000 ರೂಪಾಯಿಯನ್ನು ದೇಣಿಗೆಯಾಗಿ ನೀಡಿದಂತಾಗಿದೆ.

key words : mysore-zoo-donation-somashekar-minister-karnataka