ಬೆಂಗಳೂರಿನಲ್ಲಿ ನಮ್ಮ ಮೆಟ್ರೋ ಸಂಚಾರ ಸ್ಥಗಿತ: ಪ್ರಯಾಣಿಕರು ಪರದಾಟ.

ಬೆಂಗಳೂರು,ಜುಲೈ,,4,2023(www.justkannada.in): ತಾಂತ್ರಿಕ ಸಮಸ್ಯೆಯಿಂದಾಗಿ  ಕೆಂಗೇರಿ-ಬೈಯಪ್ಪನಹಳ್ಳಿ ಮಾರ್ಗದ ನಮ್ಮ ಮೆಟ್ರೋಸಂಚಾರ ಸ್ಥಗಿತವಾದ ಹಿನ್ನೆಲೆ, ಪ್ರಯಾಣಿಕರು ಪರದಾಡಿದ ಘಟನೆ ನಡೆದಿದೆ.

ನೇರಳೆ ಮಾರ್ಗದ ಕೆಂಗೇರಿ -ಬೈಯ್ಯಪ್ಪನಹಳ್ಳಿ ಮೆಟ್ರೋ ಸಂಚಾರ ಸ್ಥಗಿತವಾಗಿದ್ದು, ಆಫೀಸ್​ಗೆ ಹೊರಟವರೆಲ್ಲ ನಿಲ್ದಾಣದಲ್ಲೇ ಮೆಟ್ರೋಗಾಗಿ ಕಾಯುತ್ತಿದ್ದಾರೆ.  ಹೆಚ್ಚು ಜನ ಸಂಚರಿಸುವ ಅವಧಿಯಲ್ಲೇ ಮೆಟ್ರೋ ಏಕಾಏಕಿ ಸ್ಥಗಿತಗೊಂಡಿದೆ. ಇದರಿಂದ ಕಚೇರಿ, ಶಾಲಾ-ಕಾಲೇಜಿಗೆ ಹೋಗಲು ಮೆಟ್ರೋ ಅವಲಂಬಿಸಿರುವ ಪ್ರಯಾಣಿಕರು ಪರದಾಡುತ್ತಿರುವ ಪರಿಸ್ಥಿತಿ ನಿರ್ಮಾಣವಾಗಿದೆ.

ಮೊನ್ನೇ ಅಷ್ಟೇ ಈ ಮಾರ್ಗದಲ್ಲಿ ಕಾಮಗಾರಿ ಕೈಗೆತ್ತಿಕೊಂಡಿದ್ದರಿಂದ ಭಾನುವಾರ ಎರಡು ಗಂಟೆಗಳ ಕಾಲ ನಮ್ಮ ಮೆಟ್ರೋ ಸ್ಥಗಿತಗೊಳಿಸಲಾಗಿತ್ತು. ಜೂನ್ 30ರಂದು MG ರಸ್ತೆ ಮೆಟ್ರೋದಿಂದ ಬೈಯಪ್ಪನಹಳ್ಳಿ ನಿಲ್ದಾಣದವರೆಗೆ ಬೆಳಗ್ಗೆ 7ರಿಂದ 9 ಗಂಟೆವರೆಗೆ ಸಂಚರಿಸುವುದಿಲ್ಲ ಎಂದು ಬಿಎಂಆರ್​ಸಿಎಲ್  ಪ್ರಕಟಣೆ ಮೂಲಕ ಮಾಹಿತಿ ನೀಡಿತ್ತು.

Key words: namma metro- traffic – Bengaluru – stop-Passengers