ತಿರುಪತಿಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ ವಿಚಾರ- ಸರ್ಕಾರದ ವಿರುದ್ದ ಮಾಜಿ ಸಚಿವ ಸಿ.ಟಿ ರವಿ ಆಕ್ರೋಶ..

ಚಿಕ್ಕಮಗಳೂರು,ಜುಲೈ,31,2023(www.justkannada.in): ತಿರುಪತಿ ಲಡ್ಡು ತಯಾರಿಕೆಗೆ ನಂದಿನಿ ತುಪ್ಪ ಸರಬರಾಜು ಸ್ಥಗಿತ ವಿಚಾರಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಮಾಜಿ ಸಚಿವ ಸಿ.ಟಿ ರವಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಟ್ವೀಟ್ ಮಾಡಿರುವ ಸಿ.ಟಿ ರವಿ, ಚುನಾವಣೆಯಲ್ಲಿ ಕಾಂಗ್ರೆಸ್ ರಾಜಕಾರಣ ಮಾಡಿತು.  ಅಮುಲ್ ವಿಷಯ ಇಟ್ಟುಕೊಂಡು ರಾಜಕೀಯ ಮಾಡಿತು. ಈಗ ಕಾಂಗ್ರೆಸ್ ಸರ್ಕಾರ ಹಾಲಿನ ದರ ಏರಿಕೆ ಮಾಡಿದೆ.  ಹಳೇ ದರದಲ್ಲಿ ತಿರುಪತಿಗೆ ನಂದಿನಿ ತುಪ್ಪ ಕೊಡುತ್ತಿಲ್ಲ.  ಕಾಂಗ್ರೆಸ್ ಅಜೆಂಡಾಗೆ ಈ ಪ್ರಕರಣವೇ ಸಾಕ್ಷಿ. ಅಸಮರ್ಥ  ಕಾಂಗ್ರೆಸ್ ಸರ್ಕಾರದಿಂದ ಕರ್ನಾಟಕಕ್ಕೆ ಹಾನಿ ಎಂದು ಕಿಡಿಕಾರಿದರು.

ಈ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಕೆಎಂಎಫ್ ಮಾಜಿ ಅಧ್ಯಕ್ಷ ಸೋಮಶೇಖರ ರೆಡ್ಡಿ, ತಿರುಪತಿ ತಿಮ್ಮಪ್ಪನ ಸನ್ನಿಧಿಗೆ ನಂದಿನಿ ತುಪ್ಪ ಕಳಿಸಬೇಕು.  ತಿರುಪತಿಗೆ ಹಾಗೂ  ನಂದಿನಿ ತುಪ್ಪಕ್ಕೆ ಅವಿನಾಭಾವ ಸಂಬಂಧವಿದೆ. ತಿರುಪತಿಗೆ ನಂದಿನಿ ತುಪ್ಪ ಕೊಡೊದನ್ನ ನಿಲ್ಲಿಸಿದ್ರೆ ರೈತರಿಗೆ ತೊಂದರೆಯಾಗಲಿದೆ. ಈ ಬಗ್ಗೆ ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ್ ಜೊತೆ ಮಾತನಾಡುತ್ತೇನೆ ಎಂದಿದ್ದಾರೆ.

Key words: Nandini ghee -supply – Tirupati- issue – CT Ravi -outraged – government.