ಪ್ರೋಟೋಕಾಲ್ ಅಧಿಕಾರಿಗಳ ನಿರ್ಲಕ್ಷ್ಯ:  ರಾಜ್ಯಪಾಲರಿಗೆ ಫ್ಲೈಟ್ ಮಿಸ್.

ಬೆಂಗಳೂರು,ಜುಲೈ,28,2023(www.justkannada.in): ಪ್ರೋಟೋಕಾಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ರಾಜ್ಯಪಾಲ ಥಾವರ್​ ಚಂದ್​ ಗೆಹ್ಲೋಟ್ ಅವರು ಫ್ಲೈಟ್ ಮಿಸ್ ಮಾಡಿಕೊಂಡ ಘಟನೆ ನಡೆದಿದೆ.

ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಒಂದು ನಿಮಿಷ ತಡವಾಗಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದಕ್ಕೆ ಫ್ಲೈಟ್​ ಮಿಸಿ ಮಿಸ್ ಆಗಿದೆ. ಥಾವರ್ ಚಂದ್ ಗೆಹ್ಲೋಟ್ ಅವರು ನಿನ್ನೆ ಮಧ್ಯಾಹ್ನ ಹೈದರಾಬಾದ್​ಗೆ ತೆರಳಲು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಬಂದಿದ್ದರು, ಆದರೆ, ಇನ್ನೂ ಏರ್‌ ಏಷ್ಯಾ ವಿಮಾನ ಹೊರಡಲು ಸಮಯ ಇದೆ ಎಂದು ಸಿಬ್ಬಂದಿ ರಾಜ್ಯಪಾರನ್ನು ಕರೆದುಕೊಂಡು ಹೋಗಿ ವಿಐಪಿ ಲಾಂಜ್​ನಲ್ಲಿ ಕೂರಿಸಿದ್ದು, ಟೈಮ್​ ಆಗಿರುವುದು ಅವರ ಗಮನಕ್ಕೆ ಬಂದಿಲ್ಲ. ಇದರಿಂದ ವಿಮಾನ ಸರಿಯಾದ ಸಮಯಕ್ಕೆ ಟೇಕಫ್​ ಆಗಿ ಹೋಗಿದೆ.

ಬಳಿಕ ಫ್ಲೈಟ್ ಸಮಯವಾಗಿರುವುದು ಗಮನಕ್ಕೆ ಬಂದ ಕೂಡಲೇ ರಾಜ್ಯಪಾಲರು ವಿಮಾನ ಹತ್ತಲು ಹೋಗಿದ್ದಾರೆ. ಆದರೆ, ಅಷ್ಟರಲ್ಲಾಗಲೇ ವಿಮಾನ ಹೋಗಿತ್ತು. ಪ್ರೋಟೋಕಾಲ್ ಅಧಿಕಾರಿಗಳ ನಿರ್ಲಕ್ಷ್ಯದಿಂದ ವಿಮಾನ ತಪ್ಪಿದೆ. ಬಳಿಕ ಅಧಿಕಾರಿಗಳು ಮತ್ತೊಂದು ವಿಮಾನದ ಮೂಲಕ ಅವರನ್ನು ಹೈದರಾಬಾದ್​ಗೆ ಕಳುಹಿಸಿಕೊಟ್ಟಿದ್ದಾರೆ.

ಏರ್​ಪೋರ್ಟ್ ​​ನಲ್ಲಿ ರಾಜ್ಯಪಾಲರಿಗೆ ವಿಮಾನ ಮಿಸ್​ ಆದ ಹಿನ್ನೆಲೆ​ಯಲ್ಲಿ ಶಿಷ್ಟಾಚಾರ ಅಧಿಕಾರಿಗಳು ಕೆಂಪೇಗೌಡ ವಿಮಾನ ನಿಲ್ದಾಣ ಪೊಲೀಸ್​ ಠಾಣೆಗೆ ಏರ್ ಏಷ್ಯಾ ಏರ್​​ಲೈನ್ಸ್ ದೂರು ನೀಡಿದ್ದಾರೆ.‌ ವಿಮಾನ ಮಿಸ್ ಆಗಲು ಕಾರಣ ಜೊತೆಗೆ ಕ್ರಮ ಕೈಗೊಳ್ಳುವಂತೆ ದೂರಿನಲ್ಲಿ ಉಲ್ಲೇಖಿಸಿದ್ದಾರೆ.

Key words: Negligence –protocol-officers-Flight -misses – governor