ಮೂರನೇ ಬಾರಿಗೆ ದಿಲ್ಲಿ ಗದ್ದುಗೆ: ಇಂದು ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಕೇಜ್ರೀವಾಲ್

ನವದೆಹಲಿ, ಫೆಬ್ರವರಿ 16, 2020 (www.justkannada.in): ದೆಹಲಿ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಅರವಿಂದ ಕೇಜ್ರಿವಾಲ್ ಭಾನುವಾರ ಮೂರನೇ ಬಾರಿಗೆ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಲಿದ್ದಾರೆ.

ಈ ಹಿನ್ನೆಲೆಯಲ್ಲಿ ಮಧ್ಯಾಹ್ನ 2ರವರೆಗೆ ರಾಮ್‌ಲೀಲಾ ಮೈದಾನದ ಸುತ್ತ ನಿರ್ಬಂಧ ವಿಧಿಸಲಾಗಿದೆ. ರಾಮಲೀಲಾ ಮೈದಾನದಲ್ಲಿ ನಡೆಯುವ ಅದ್ಧೂರಿ ಸಮಾರಂಭದಲ್ಲಿ ಕೇಜ್ರಿವಾಲ್ ಸಂಪುಟದ ಇತರ ಸಚಿವರೊಂದಿಗೆ ಮಧ್ಯಾಹ್ನ 12.15ಕ್ಕೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಈ ಸಮಾರಂಭಕ್ಕೆ ಪ್ರಧಾನಿ ನರೇಂದ್ರ ಮೋದಿ ಅವರಿಗೂ ಆಹ್ವಾನ ನೀಡಲಾಗಿದೆ. ರಾಮ್‌ಲೀಲಾ ಮೈದಾನಕ್ಕೆ ತೆರಳುವ ದಾರಿಯಲ್ಲೆಲ್ಲ ಅರವಿಂದ ಕೇಜ್ರಿವಾಲ್ ಅವರ ಭಾವಚಿತ್ರವಿರುವ ಮತ್ತು ‘ಧನ್ಯವಾದ್ ದಿಲ್ಲಿ’ ಎಂಬ ಸಂದೇಶವಿರುವ ದೊಡ್ಡ ಬ್ಯಾನರ್‌ಗಳನ್ನು ಕಟ್ಟಲಾಗಿದೆ.