ಲಾಕ್ ಡೌನ್ ಟೈಮಲ್ಲಿ ನೈಸರ್ಗಿಕ ಕೃಷಿ ಮಾಡಿ ರಿಯಲ್ ಸ್ಟಾರ್

ಬೆಂಗಳೂರು, ಜೂನ್ 16, 2020 (www.justkannada.in): ಕೊರೊನಾ ಲಾಕ್ ಡೌನ್ ಅವಧಿಯಲ್ಲಿ ನಟ ಉಪೇಂದ್ರ ಕೃಷಿ ಮಾಡುವುದರಲ್ಲಿ ತೊಡಗಿಕೊಂಡು ಗಮನ ಸೆಳೆದಿದ್ದಾರೆ.

ಕೇವಲ ಎರಡೂವರೆ ತಿಂಗಳಲ್ಲಿ ಬೆಳೆಯನ್ನೂ ತೆಗೆದಿದ್ದಾರೆ.  ತಮ್ಮ ಹೊಲದಲ್ಲಿ ಸಾವಯವ ಪದ್ಧತಿ ಮೂಲಕ ತರಕಾರಿ, ಹೂವು ಬೆಳೆದಿದ್ದು, ಈ ಕುರಿತು ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಂಚಿಕೊಂಡಿದ್ದಾರೆ.

ರಿಯಲ್ ಸ್ಟಾರ್ ಪ್ರಜಾಕೀಯ, ಸಿನಿಮಾ ನಡುವೆಯೂ ನೈಸರ್ಗಿಕ ಕೃಷಿ ಬೆಳೆದು ಎಲ್ಲರಿಗೂ ಮಾದರಿಯಾಗಿದ್ದಾರೆ. ವಿಡಿಯೋ ಪೋಸ್ಟ್ ಮಾಡಿ ಸಾಲುಗಳನ್ನು ಬರೆದಿದ್ದು, ಅತೀ ಕಡಿಮೆ ವೆಚ್ಚದಲ್ಲಿ ಮಾಡಬಹುದಾದ ನೈಸರ್ಗಿಕ ಕೃಷಿ ಎಂದು ತಿಳಿಸಿದ್ದಾರೆ.