ಈದ್ಗಾ ಮೈದಾನ ವಿವಾದ: ಯಥಾಸ್ಥಿತಿ ಕಾಪಾಡುವಂತೆ ಹೈಕೋರ್ಟ್ ಆದೇಶ.

ಬೆಂಗಳೂರು,ಆಗಸ್ಟ್,25,2022(www.justkannada.in):   ಚಾಮರಾಜಪೇಟೆ ಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ಯಥಾಸ್ಥಿತಿ ಕಾಪಾಡುವಂತೆ ರಾಜ್ಯ ಹೈಕೋರ್ಟ್ ಆದೇಶಿಸಿದೆ.

ಈದ್ಗಾ ಮೈದಾನ ಮಾಲೀಕತ್ವ ವಿಚಾರಕ್ಕೆ ಸಂಬಂಧಿಸಿದಂತೆ ಅರ್ಜಿ ವಿಚಾರಣೆ ನಡೆಸಿದ ಹೈಕೋರ್ಟ್ ನ್ಯಾಯಮೂರ್ತಿ  ಹೇಮಂತ್  ಚಂದನ್ ಗೌಡರ ಈ ಆದೇಶ ಹೊರಡಿಸಿದ್ದಾರೆ.

ಎಂದಿನಂತೆ ಈದ್ಗಾ ಮೈದಾನವನ್ನ ಆಟದ ಮೈದಾನವಾಗಿ ಮಾತ್ರ ಬಳಸುವುದು ರಂಜಾನ್ ಬಕ್ರೀದ್ ಹಬ್ಬದಲ್ಲಿ ಮಾತ್ರ  ಪ್ರಾರ್ಥನೆಗೆ ಅವಕಾಶ ನೀಡಲಾಗಿದೆ. ವಿಚಾರಣೆ ಸೆಪ್ಟಂಬರ್ 23ಕ್ಕೆ ಮುಂದೂಡಿಕೆ ಮಾಡಲಾಗಿದೆ. ಈ ಮೂಲಕ  ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಆಚರಣೆಗೆ ಮುಂದಾಗಿದ್ದ ಸಂಘಟನೆಗಳಿಗೆ ಹಿನ್ನಡೆಯಾದಂತಾಗಿದೆ.

Key words:  Idga Maidan –Controversy-High Court