ಕೊರೊನಾ 3ನೇ ಅಲೆಗೆ ಮೈಸೂರು ನಗರ ಪಾಲಿಕೆ ಸಿದ್ಧತೆ; ಪೀಡಿಯಾಟ್ರಿಕ್ ಕೋವಿಡ್ ಕೇರ್ ಆರಂಭ: ಶಿಲ್ಪಾ ನಾಗ್

kannada t-shirts

ಮೈಸೂರು, ಮೇ 23, 2021 (www.justkannada.in): ಮೈಸೂರಿನಲ್ಲಿ ಕೊರೊನಾ 3ನೇ ಅಲೆ ಆತಂಕ ಶುರುವಾಗಿದೆ. ಮಕ್ಕಳ ಮೇಲೆ ಪರಿಣಾಮ ಬೀರಲಿರುವ ಕೊರೊನಾ ಮೂರನೇ ಅಲೆ ಹಿನ್ನೆಲೆಯಲ್ಲಿ ಕೊರೊನಾ ನಿಯಂತ್ರಿಸಲು ಪಾಲಿಕೆಯಿಂದ ಕ್ರಮ ವಹಿಸಲಾಗುತ್ತಿದೆ.

ಇದಕ್ಕಾಗಿ ಮೈಸೂರಿನಲ್ಲಿ ಪೀಡಿಯಾಟ್ರಿಕ್ ಕೋವಿಡ್ ಕೇರ್ ಆರಂಭಿಸಲಾಗುತ್ತಿದೆ. ಪರಿಸ್ಥಿತಿ ಕೈಮೀರದಂತೆ ಮುಂಜಾಗ್ರತಾ ಕ್ರಮವಾಗಿ ಈ ಕ್ರಮ ವಹಿಸಲಾಗುತ್ತಿದೆ. ಪಾಲಿಕೆ ವ್ಯಾಪ್ತಿಯಲ್ಲಿ 150 ಮಕ್ಕಳ ತಜ್ಞರು ಇದ್ದಾರೆ. ಜೊತೆಗೆ ಮಕ್ಕಳಿಗೆ ಬೇಕಾದ ಐಸಿಯು, ಉಪಕರಣಗಳು ಎಷ್ಟಿವೆ ಎಂಬ ಬಗ್ಗೆ ಮಾಹಿತಿ ಸಂಗ್ರಹಿಸಲಾಗುತ್ತಿದೆ.

ದೊಡ್ಡವರಿಗೆ ನೀಡುವಂತೆ ಮಾತ್ರೆಗಳನ್ನು ಮಕ್ಕಳಿಗೆ ನೀಡಲು ಸಾಧ್ಯವಿಲ್ಲ. ಹಾಗಾಗಿ ಪೀಡಿಯಾಟ್ರಿಕ್ ಮೆಡಿಕಲ್ ಕಿಟ್ ತಯಾರು ಮಾಡಲು ಸಿದ್ಧತೆ ನಡೆಸಲಾಗಿದೆ ಎಂದು ಪಾಲಿಕೆ ಆಯುಕ್ತೆ ಶಿಲ್ಪಾನಾಗ್  ಮಾಹಿತಿ ನೀಡಿದ್ದಾರೆ.

ಸದ್ಯ ಮೈಸೂರಿನಲ್ಲಿ ದಿನಕ್ಕೆ ನಾಲೈದು ಮಕ್ಕಳಲ್ಲಿ ಕೊರೊನಾ ಸೋಂಕು ಕಾಣಿಸಿಕೊಳ್ಳುತ್ತಿದೆ. ಮಕ್ಕಳಲ್ಲಿ ರೋಗ ನಿರೋಧಕ ಶಕ್ತಿ ಹೆಚ್ಚಾಗಿರುವ ಕಾರಣ ಅವರಿಗೆ ಸೋಂಕು ತಗುಲಿದರೂ ಅಪಾಯದ ಮಟ್ಟ ತಲುಪಿಲ್ಲ.

ಆದರೆ ಮುಂಜಾಗ್ರತೆ ತೆಗೆದುಕೊಳ್ಳದೆ ಇರುವಂತಿಲ್ಲ. ಮುಂಜಾಗ್ರತಾ ಕ್ರಮವಾಗಿ‌ ಎಲ್ಲಾ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಮಹಾನಗರ ಪಾಲಿಕೆ ಆಯುಕ್ತ ಶಿಲ್ಪಾ ನಾಗ್ ತಿಳಿಸಿದ್ದಾರೆ.

website developers in mysore