ಪವರ್ ಟಿವಿ ಸುದ್ಧಿವಾಹಿನಿ ಪ್ರಸಾರಕ್ಕೆ ತಡೆ ಒಡ್ಡಿದ ಸರ್ಕಾರದ ಕ್ರಮಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಖಂಡನೆ….

ಮೈಸೂರು,ಸೆಪ್ಟಂಬರ್,29,2020(www.justkannada.in): ಸಕಾರಣವಿಲ್ಲದೇ ಪವರ್ ಟಿವಿ ಸುದ್ಧಿವಾಹಿನಿ ಪ್ರಸಾರಕ್ಕೆ ತಡೆ ಒಡ್ಡಿದ ಸರ್ಕಾರದ ಕ್ರಮಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಖಂಡನೆ ವ್ಯಕ್ತಪಡಿಸಿದೆ.

ಪ್ರಜಾಪ್ರಭುತ್ವದ ನಾಲ್ಕನೇ ಅಂಗವಾದ ಮಾಧ್ಯಮ ಕ್ಷೇತ್ರದ ಮೇಲೆ ಪದೇ ಪದೇ ಈ ರೀತಿಯ ತೊಂದರೆಗಳು ಒಂದಿಲ್ಲೊಂದು ಕಾರಣಕ್ಕೆ ಎದುರಾಗುತ್ತಿರುವುದು ವಿಷಾದನೀಯ ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಬೇಸರ ವ್ಯಕ್ತಪಡಿಸಿದೆ.mysore-district-journalists-association-condemns-government-action-blocking-broadcast-power-tv

ಒಂದು ವಾಹಿನಿಯನ್ನು ಸ್ಥಗಿತಗೊಳಿಸುವುದರಿಂದ ನೂರಾರು ಕುಟುಂಬಗಳು ಬೀದಿಪಾಲಾಗಲಿವೆ ಎಂಬ ಕನಿಷ್ಟ ಪ್ರಜ್ಞೆ ಪೊಲೀಸರಿಗೆ ಇಲ್ಲದಿರುವುದು ಬೇಸರದ ಸಂಗತಿಯಾಗಿದೆ. ಹಾಗೆಯೇ ಆಗಿರುವ ಅನಾಹುತವನ್ನು ಸರಿಪಡಿಸುವ ಮೂಲಕ ಅಲ್ಲಿನ ನೌಕರರಿಗೆ ನೈತಿಕ ಬೆಂಬಲ ಸೂಚಿಸಬೇಕಾದ ಹೊಣೆ ಸರ್ಕಾರದ ಮೇಲಿದೆ. ಈ ನಿಟ್ಟಿನಲ್ಲಿ ಸರ್ಕಾರ ಕಾರ್ಯಪ್ರವೃತ್ತರಾಗಬೇಕು ಎಂದು ಮೈಸೂರು ಜಿಲ್ಲಾ ಪತ್ರಕರ್ತರ ಸಂಘ ಆಗ್ರಹಿಸಿದೆ.

Key words: Mysore District Journalists Association -condemns –government- action -blocking -broadcast -Power TV