ಹುಣಸೋಡಿನಲ್ಲಿ ಜಿಲೆಟಿನ್, ಹಿರೇನಾಗವಲ್ಲಿ ಕಲ್ಲು ಕ್ವಾರಿ ಸ್ಪೋಟ, 12 ಜನ ಕಾರ್ಮಿಕರ ಸಾವಿಗೆ ಯಾರು ಹೊಣೆ? :  ಮಾಜಿ ಸಿಎಂ ಸಿದ್ದರಾಮಯ್ಯ

kannada t-shirts

ಬೆಂಗಳೂರು,ಮಾರ್ಚ್,18,2021(www.justkannada.in) : ಶಿವಮೊಗ್ಗದ ಹುಣಸೋಡಿನಲ್ಲಿ ಜಿಲೆಟಿನ್ ಸ್ಪೋಟ ಸಂಭವಿಸಿ ಒಂದು ತಿಂಗಳ ಒಳಗಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಹಿರೇನಾಗವಲ್ಲಿ ಎಂಬಲ್ಲಿನ ಕಲ್ಲು ಕ್ವಾರಿಯಲ್ಲಿ ಇನ್ನೊಂದು ಸ್ಪೋಟ ಸಂಭವಿಸಿ, 6 ಮಂದಿ ಬಡ ಕಾರ್ಮಿಕರು ಸಾವಿಗೀಡಾದರು. ಈ ಎಲ್ಲಾ 12 ಜನ ಕಾರ್ಮಿಕರ ಸಾವಿಗೆ ಯಾರು ಹೊಣೆ? ಇದನ್ನು ಸರ್ಕಾರದ ಬೇಜವಾಬ್ದಾರಿತನ ಅನ್ನದೆ ಇನ್ನೇನು ಹೇಳಬೇಕು? ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.jkಅಧಿವೇಶನದಲ್ಲಿ ಈ ಕುರಿತು ಮಾತನಾಡಿದ ಅವರು, ಜನವರಿ 21ರಂದು ಶಿವಮೊಗ್ಗ ನಗರ ಸಮೀಪದ ಹುಣಸೋಡು ಎಂಬಲ್ಲಿ ಜಿಲೆಟಿನ್ ಸ್ಪೋಟಗೊಂಡು 6 ಮಂದಿ ಕಾರ್ಮಿಕರು ಸಾವಿಗೀಡಾಗಿದ್ದರು. ಈ ವಿಚಾರವನ್ನು ಹಿಂದಿನ ವಿಧಾನಸಭಾ ಅಧಿವೇಶನದಲ್ಲಿ ಪ್ರಸ್ತಾಪಿಸಿ, ಕಲ್ಲು ಗಣಿಗಾರಿಕೆ ವಿಚಾರದಲ್ಲಿ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಕೈಗೊಳ್ಳಬೇಕು ಎಂದು ಒತ್ತಾಯಿಸಿದೆ ಎಂದರು.

ಈ ಘಟನೆಯ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆದು ಸತ್ಯಾಸತ್ಯತೆ ಹೊರಬರಬೇಕಾದರೆ ಹೈಕೋರ್ಟ್ ನ ಹಾಲಿ ನ್ಯಾಯಾಧೀಶರ ನೇತೃತ್ವದ ಸಮಿತಿ ರಚನೆ ಮಾಡಿ, ಅವರ ಮೂಲಕ ತನಿಖೆಯಾಗಬೇಕು ಎಂದು ಆಗ್ರಹಿಸಿದ್ದೆ ಎಂದು ಹೇಳಿದರು.

ಹುಣಸೋಡಿನ ಅಕ್ರಮ ಗಣಿಗಾರಿಕೆಯಲ್ಲಿ ರಾಜಕೀಯ ನಾಯಕರು ಶಾಮೀಲಾಗಿರುವ ಬಗ್ಗೆ ಮಾತುಗಳು ಕೇಳಿಬಂದಿತ್ತು. ಸಿಐಡಿ ಅಥವಾ ಹಿರಿಯ ಅಧಿಕಾರಿಗಳ ತನಿಖಾ ತಂಡ ರಚಿಸಿ ಆ ಮೂಲಕ ತನಿಖೆ ಮಾಡಿಸಿದರೆ ರಾಜಕೀಯ ನಾಯಕರು ತಮ್ಮ ಪ್ರಭಾವ ಬಳಸಿ ಸತ್ಯ ಹೊರಬರೋದಕ್ಕೆ ಬಿಡಲ್ಲ ಎಂಬುದು ನನ್ನ ಉದ್ದೇಶವಾಗಿತ್ತು. ಆದರೆ, ಅಂದು ನನ್ನ ಅಭಿಪ್ರಾಯಕ್ಕೆ ಸರ್ಕಾರ ಒಪ್ಪಿರಲಿಲ್ಲ ಎಂದು ದೂರಿದರು.

tamarind-Gelatin-Hirenagavalli-Stone-quarry-explosion-12 workers-Who-responsible-death?-Former CM-Siddaramaiah
ಕೃಪೆ-internet

ಪ್ರಾದೇಶಿಕ ಆಯುಕ್ತರ ಮೂಲಕ ತನಿಖೆ ನಡೆಸಿ, ಅವರ ವರದಿ ಆಧರಿಸಿ ಕ್ರಮಕೈಗೊಳ್ಳುತ್ತೇವೆ ಹಾಗೂ ಮುಂದಿನ ದಿನಗಳಲ್ಲಿ ಇಂತಹ ದುರ್ಘಟನೆಗಳು ನಡೆಯದಂತೆ ಕ್ರಮವಹಿಸುತ್ತೇವೆ ಎಂಬ ಭರವಸೆಯನ್ನು ಸರ್ಕಾರ ಸದನಕ್ಕೆ ನೀಡಿತ್ತು ಎಂದು ತಿಳಿಸಿದ್ದಾರೆ.

key words : tamarind-Gelatin-Hirenagavalli-Stone-quarry-explosion-12 workers-Who-responsible-death?-Former CM-Siddaramaiah

website developers in mysore