ನಾಳೆಯಿಂದ ವಿಧಾನಮಂಡಲ ಅಧಿವೇಶನ: ತಂತ್ರಗಾರಿಕೆಗೆ ಇಂದು ಸಂಜೆ ಕಾಂಗ್ರೆಸ್ ಸಭೆ

ಬೆಂಗಳೂರು, ಫೆಬ್ರವರಿ 16, 2020 (www.justkannada.in): ನಾಳೆ ಆರಂಭವಾಗಲಿರುವ ವಿಧಾನಮಂಡಲದ ಅಧಿವೇಶನದ ಹಿನ್ನೆಲೆಯಲ್ಲಿ ಸರಕಾರವನ್ನು ಇಕ್ಕಟ್ಟಿಗೆ ಸಿಲುಕಿಸಲು ತಂತ್ರಗಾರಿಕೆ ಹೆಣೆಯಲು ಭಾನುವಾರ ಸಂಜೆ ಮಹತ್ವದ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ.

ನಗರದ ಖಾಸಗಿ ಹೊಟೇಲ್‌ನಲ್ಲಿ ಸಂಜೆ 5 ಕ್ಕೆ ವಿಪಕ್ಷ ಹಾಗೂ ಶಾಸಕಾಂಗ ಪಕ್ಷ‌ದ ನಾಯಕರಾಗಿರುವ ಸಿದ್ದರಾಮಯ್ಯ ನೇತೃತ್ವದಲ್ಲಿ ಸಭೆ ಕರೆಯಲಾಗಿದೆ.

ವಿಧಾನಮಂಡಲ ಅಧಿವೇಶನದಲ್ಲಿ ಯಾವ ರೀತಿಯಲ್ಲಿ ಚರ್ಚೆಗಳಲ್ಲಿ ಯಾರು ಭಾಗಿಯಾಗಬೇಕು ಹಾಗೂ ಯಾವ ವಿಚಾರಗಳನ್ನು ಮುಂದಿಟ್ಟುಕೊಂಡು ಸರಕಾರವನ್ನು ತರಾಟೆಗೆ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಚರ್ಚೆ ನಡೆಯಲಿದೆ.