ರಾಜ್ಯಕ್ಕೆ ಒಳ್ಳೆಯದಾಗ್ಬೇಕು ಅಂದ್ರೆ ಎರಡು ರಾಷ್ಟ್ರೀಯ ಪಕ್ಷಗಳು ಮನೆಗೆ ಹೋಗ್ಬೇಕು- ಶಾಸಕ ಬಂಡೆಪ್ಪ ಖಾಶೆಂಪುರ್

ಬೀದರ್,ಏಪ್ರಿಲ್,4,2021(www.justkannada.in):  ಕರ್ನಾಟಕ ರಾಜ್ಯಕ್ಕೆ ಒಳ್ಳೆಯದಾಗ್ಬೇಕು ಅಂದರೆ ಎರಡು ರಾಷ್ಟ್ರೀಯ ಪಕ್ಷಗಳು ಮನೆಗೆ ಹೋಗ್ಬೇಕು. ಪ್ರಾದೇಶಿಕ ಪಕ್ಷ ಜೆಡಿಎಸ್ ಅಧಿಕಾರಕ್ಕೆ ಬರಬೇಕೆಂದು ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕರಾಗಿರುವ ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಶಾಸಕ ಬಂಡೆಪ್ಪ ಖಾಶೆಂಪುರ್ ಅವರು ಹೇಳಿದರು.Illegally,Sand,carrying,Truck,Seized,arrest,driver

ಜಿಲ್ಲೆಯ ಬಸವಕಲ್ಯಾಣ ಕ್ಷೇತ್ರದ ಬಸವಕಲ್ಯಾಣ, ಹತ್ಯಾಳ, ಹಾರಕೂಡ, ಸಿರಗಾಪೂರ, ಗದಲೇಗಾಂವ್, ಮೈಸಲಗಾ ಸೇರಿದಂತೆ ವಿವಿಧ ಹಳ್ಳಿಗಳಲ್ಲಿ  ಜೆಡಿಎಸ್ ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಪರ ಪ್ರಚಾರ ನಡೆಸಿ ಮಾತನಾಡಿದ ಬಂಡೆಪ್ಪ ಖಾಶೆಂಪೊರ್, ರಾಜ್ಯದಿಂದ ಆಯ್ಕೆಯಾದ ಅಷ್ಟು ಬಿಜೆಪಿ ಎಂ.ಪಿಗಳು ರಾಜ್ಯದ ಪರವಾಗಿ ರಾಜ್ಯದ ಜನತೆಯ ಪರವಾಗಿ ಕೇಂದ್ರದಲ್ಲಿ ಯಾವತ್ತಾದ್ರು ಧ್ವನಿ ಎತ್ತಿದ್ದಾರಾ..? ಬಸವಕಲ್ಯಾಣದಲ್ಲಿ ಸಾಹೇಬ್, ಬೀದರ್ ನಲ್ಲಿ ಬಂಡೆಪ್ಪ ಖಾಶೆಂಪುರ್, ಬೆಂಗಳೂರಿನಲ್ಲಿ ಕುಮಾರಣ್ಣ ನಾವು ಯಾವಾಗಲೂ ನಿಮ್ಮ ಕೆಲಸ ಮಾಡಲು ತಯಾರಿದ್ದೇವೆ ಎಂದರು.

ಕಾಂಗ್ರೆಸ್ ನವರು ಬಿಜೆಪಿಯವರು ಮ್ಯಾಚ್ ಪಿಕ್ಸಿಂಗ್ ಗಿರಾಕಿಗಳು. ಕಾಂಗ್ರೆಸ್ ನವ್ರು ಅಧಿಕೃತವಾಗಿ ವಿರೋಧ ಪಕ್ಷದ ಸ್ಥಾನದಲ್ಲಿದ್ದಾರೆ. ಆದ್ರೆ, ಅವರು ಯಾವತ್ತಾದರೂ ರಾಜ್ಯ ಸರ್ಕಾರದ ಒಂದೇ ಒಂದು ಹಗರಣವನ್ನು ಬಯಲಿಗೆಳೆದಿದ್ದಾರಾ..? ಅವ್ರೆಲ್ಲ ಬರೀ ಮ್ಯಾಚ್ ಪಿಕ್ಸಿಂಗ್ ಮಾಡಿಕೊಳ್ತಾರೆ. ಬಸವಣ್ಣನ ನಾಡಾದ ಬಸವಕಲ್ಯಾಣದಲ್ಲಿ ಜಾತ್ಯತೀತವಾಗಿ ಎಲ್ಲರೂ ಪ್ರಾದೇಶಿಕ ಪಕ್ಷವಾದ ಜಾತ್ಯತೀತ ಜನತಾದಳಕ್ಕೆ ಮತ ನೀಡಬೇಕೆಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಮನವಿ ಮಾಡಿದರು.

ಇದೇ ವೇಳೆ ತಮ್ಮ ಪಕ್ಷ ಅಧಿಕಾರದಲ್ಲಿದ್ದ ದಿನಗಳನ್ನು ನೆನಪಿಸಿಕೊಂಡ ಅವರು, ನಮ್ಮದು ರೈತರ ಪಾರ್ಟಿ, ನಾನು ಸಹಕಾರಿ ಸಚಿವನಾಗಿದ್ದಾಗ ರಾಜ್ಯದ ಒಳಿತಿಗಾಗಿ ಅನೇಕ ಯೋಜನೆಗಳನ್ನು ಜಾರಿಗೊಳಿಸಿದ್ದೆ. ಕೃಷಿ ಸಚಿವನಾಗಿದ್ದಾಗ ರೈತರ ಸಾಲ ಮನ್ನಾ ಮಾಡಿದ್ದೆ. ಮೋದಿಯವರು ರೈತರಿಗೆ ಎರಡು ಸಾವಿರ ರೂ. ಕೊಡಲು ಹರಸಾಹಸ ಪಡ್ತಿದ್ದಾರೆ. ನಾವು ರೈತರ ಸಾಲ ಮನ್ನಾ ಮಾಡಲಿಲ್ಲವೇ..? ಎಂದು ಪ್ರಶ್ನಿಸಿದರು.two-national-parties-go-home-mla-bundeppa-khashempur

ಹಿಂದಿನ ಸಮ್ಮಿಶ್ರ ಸರ್ಕಾರದ ಸಂದರ್ಭದಲ್ಲಿ ರೈತರ ಸಾಲಮನ್ನಾ ಮಾಡಲು ನಾವು ಮುಂದಾದಾಗ ಕಾಂಗ್ರೆಸ್ ನವರು ವಿರೋಧ ವ್ಯಕ್ತಪಡಿಸಿದರು. ಆಗ ನಾವು ಸಮ್ಮಿಶ್ರ ಸರ್ಕಾರ ಅಧಿಕಾರದಲ್ಲಿ ಇರ್ಬೇಕು ಅಂದ್ರೆ ರೈತರ ಸಾಲಮನ್ನಾಕ್ಕೆ ಅವಕಾಶ ಕೊಡ್ಬೇಕು ಎಂದು ಪಟ್ಟು ಹಿಡಿದು ರೈತರ ಸಾಲಮನ್ನಾ ಮಾಡಿದ್ದೇವು ಎಂದು ಶಾಸಕ ಬಂಡೆಪ್ಪ ಖಾಶೆಂಪುರ್ ರವರು ಹೇಳಿದರು.

ಈ ಸಂದರ್ಭದಲ್ಲಿ ಜೆಡಿಎಸ್ ಜಿಲ್ಲಾಧ್ಯಕ್ಷ ರಮೇಶ್ ಪಾಟೀಲ್ ಸೋಲಾಪೂರ, ಅಭ್ಯರ್ಥಿ ಸೈಯದ್ ಯಸ್ರಬ್ ಅಲಿ ಖಾದ್ರಿ ಸೇರಿದಂತೆ ಅನೇಕರು ಮತಯಾಚನೆ ನಡೆಸಿದರು. ಜೆಡಿಎಸ್ ಪಕ್ಷದ ವಿವಿಧ ಘಟಕಗಳ ಅಧ್ಯಕ್ಷರು, ಮುಖಂಡರು, ಕಾರ್ಯಕರ್ತರು ಸೇರಿದಂತೆ ಅನೇಕರಿದ್ದರು.

Key words: Two -national parties- go home-MLA -Bundeppa Khashempur