ಬರೀ ಪ್ರಧಾನಿ ಮೋದಿ ಟೀಕಿಸುವುದೇ ಕೆಲಸ: ಬರಗಾಲದ ಬಗ್ಗೆ ಚರ್ಚೆಯಾಗುತ್ತಿಲ್ಲ- ಶಾಸಕ ಬಿವೈ ವಿಜಯೇಂದ್ರ ಅಸಮಾಧಾನ.

ಬೆಂಗಳೂರು,ಜುಲೈ,14,2023(www.justkannada.in): ರಾಜ್ಯದಲ್ಲಿ ಹಲವು ಕಡೆಗಳಲ್ಲಿ ಬರಗಾಲ ಎದುರಾಗಿದೆ. ಆದರೆ ಸದನದಲ್ಲಿ ಬರಗಾಲದ ಬಗ್ಗೆ ಚರ್ಚೆಯಾಗುತ್ತಿಲ್ಲ. ಬರೀ ಪ್ರಧಾನಿ ಮೋದಿಯನ್ನ ಟೀಕಿಸುವ ಕೆಲಸ ಮಾತ್ರ ನಡೆಯುತ್ತಿದೆ ಎಂದು ಬಿಜೆಪಿ ಶಾಸಕ ಬಿವೈ ವಿಜಯೇಂದ್ರ ಅಸಮಾಧಾನ ವ್ಯಕ್ತಪಡಿಸಿದರು.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಬಿವೈ ವಿಜಯೇಂದ್ರ,  ನೂತನ ಸರ್ಕಾರ ಹನಿಮೂನ್ ಮೂಡ್ ನಿಂದ ಹೊರಬಂದಿಲ್ಲ ಕಲ್ಯಾಣ ಕರ್ನಾಟಕದಲ್ಲಿ ಮಳೆಯಾಗಿಲ್ಲ ಬರಗಾಲ ಎದುರಾಗಿದೆ ಮಲೆನಾಡು ಭಾಗದಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದೆ.  ಸಿಎಂ  ಗ್ಯಾರಂಟಿ ಕಾರ್ಡ್ ತೋರಿಸಿ ತಮ್ಮ ಬೆನ್ನು ತಟ್ಟಿಕೊಳ್ಳುತ್ತಿದ್ದಾರೆ ಎಂದು ಕಿಡಿಕಾರಿದರು.

ಬರಗಾಲದ ಬಗ್ಗೆ ಸದನದಲ್ಲಿ ಚರ್ಚಿಯಾಗುತ್ತಿಲ್ಲ. ಪ್ರಧಾನಿ ಮೋದಿ ಬಗ್ಗೆ ಟೀಕೆ ಮಾತ್ರ ನಡೆಯುತ್ತಿದೆ. ಗ್ಯಾರಂಟಿ ಕಾರ್ಡ್ ನಿಂದ ಜನರಿಗೆ ಯಾವುದೇ ಪ್ರಯೋಜನವಿಲ್ಲ ಎಂದು ಬಿವೈ ವಿಜಯೇಂದ್ರ ಹೇಳಿದರು.

Key words: no discussion a-bout- drought – MLA -BY Vijayendra