ಜುಬಿಲೆಂಟ್ಸ್ ಕಾರ್ಖಾನೆ ಪುನಾರಂಭಕ್ಕೆ ಸರ್ಕಾರ ಅನುಮತಿ ನೀಡಿರುವ ಮಾಹಿತಿ ಇಲ್ಲ: ಸಚಿವ ಸೋಮಶೇಖರ್

ಮೈಸೂರು, ಮೇ 22, 2020 (www.justkannada.in): ಜುಬಿಲೆಂಟ್ಸ್ ಕಾರ್ಖಾನೆ ಪುನರಾರಂಭಕ್ಕೆ ಸರ್ಕಾರ ಅನುಮತಿ ನೀಡಿರಬಹುದು. ನನಗೆ ಇನ್ನು ಆ ಬಗ್ಗೆ ಮಾಹಿತಿ ಸಿಕ್ಕಿಲ್ಲ ಎಂದು ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದ್ದಾರೆ.

ಗೃಹಸಚಿವರು ಮೈಸೂರಿಗೆ ಬಂದ ಮೇಲೆ ಖಚಿತ ಮಾಹಿತಿ ಸಿಗಲಿದೆ. ಜುಬಿಲೆಂಟ್ಸ್ ಅಷ್ಟೇ ಅಲ್ಲ ಎಲ್ಲ ಕಾರ್ಖಾನೆಗೆ ಅನುಮತಿ ನೀಡಲಾಗಿದೆ. ಜುಬಿಲೆಂಟ್ಸ್ ವಿಚಾರದಲ್ಲಿ ಸರ್ಕಾರದ ಮಧ್ಯಪ್ರವೇಶ ಮಾಡಬೇಕಾಗಿತ್ತು ಎಂದು ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಹೇಳಿದ್ದಾರೆ.

ಕಾರ್ಖಾನೆ ಆರಂಭಕ್ಕೆ ಜುಬಿಲೆಂಟ್ಸ್ ಕಾರ್ಖಾನೆಯವರೇ ಈ ಬಗ್ಗೆ ಮನವಿ ಮಾಡಿದ್ದರು. ಸದ್ಯಕ್ಕೆ ಈ ಬಗ್ಗೆ ನನಗೆ ಮಾಹಿತಿ ಇಲ್ಲ ಎಂದು ಮೈಸೂರು ಉಸ್ತುವಾರಿ ಸಚಿವ ಎಸ್.ಟಿ.ಸೋಮಶೇಖರ್ ಮಾಹಿತಿ ನೀಡಿದ್ದಾರೆ.