ಇಂಡಿಯಾ ಮೈತ್ರಿಕೂಟ ಒಂದಾಗುವ ಗ್ಯಾರಂಟಿ ಇಲ್ಲ-ವಿಪಕ್ಷ ನಾಯಕ ಆರ್.ಅಶೋಕ್ ವ್ಯಂಗ್ಯ.

ಬೆಂಗಳೂರು, ಜನವರಿ,24,2024(www.justkannada.in):  ಲೋಕಸಭೆ ಚುನಾವಣೆಯಲ್ಲಿ ಟಿಎಂಸಿ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಟಿಎಂಸಿ ಮುಖ್ಯಸ್ಥೆ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ  ಹೇಳಿಕೆ ನೀಡಿರುವ ವಿಚಾರ ಕುರಿತು ಪ್ರತಿಕ್ರಿಯಿಸಿರುವ ರಾಜ್ಯ ವಿಪಕ್ಷ ನಾಯಕ ಆರ್.ಅಶೋಕ್, ಮೈತ್ರಿಕೂಟ ಒಂದಾಗುವ ಗ್ಯಾರಂಟಿ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

ಈ ಕುರಿತು ಮಾತನಾಡಿದ ಆರ್. ಅಶೋಕ್, ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಎಷ್ಟು ಸ್ಥಾನಗಳನ್ನು ಗೆಲ್ಲುತ್ತದೆಯೋ ಅಷ್ಟು ಸ್ಥಾನ ನಾನು ಪಶ್ಚಿಮ ಬಂಗಾಳದಲ್ಲಿ ಗೆಲ್ಲುತ್ತೇನೆ ಎಂದು ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಪಶ್ಚಿಮ ಬಂಗಾಳದಲ್ಲಿ ನಿಜ ಸ್ಥಿತಿಯೂ ಹಾಗೆ ಇದೆ. ಸಂಸತ್ ​ನಲ್ಲಿ ವಿಪಕ್ಷ ನಾಯಕನಾಗುವ ಯೋಗ್ಯತೆ ಕಾಂಗ್ರೆಸ್​ ಪಕ್ಷಕ್ಕಿಲ್ಲ ಎಂದು ಟೀಕಿಸಿದರು.

ಬಿಜೆಪಿಗೆ ಮಾಜಿ ಸಿಎಂ ಜಗದೀಶ್ ಶೆಟ್ಟರ್ ವಾಪಸ್ ಆಗುತ್ತಾರೆಯೇ ಎಂಬ ವಿಚಾರಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಆರ್.ಅಶೋಕ್,  ಶೆಟ್ಟರ್​ ಮತ್ತೆ ಬಿಜೆಪಿಗೆ ಬರುವ ಬಗ್ಗೆ ವರಿಷ್ಠರು ನಿರ್ಧರಿಸುತ್ತಾರೆ. ಪಾಪ ಶೆಟ್ಟರ್ ಕಾಂಗ್ರೆಸ್​ ಪಕ್ಷದಲ್ಲಿ ಮೂಲೆಗುಂಪಾಗಿದ್ದಾರೆ. ಸರ್ಕಾರ ಬಂದು 8 ತಿಂಗಳಾದ್ರೂ ಅಧಿಕಾರವನ್ನ ಕೊಟ್ಟಿಲ್ಲ. ಅಲ್ಲಿಗೆ ಹೋಗಿ ನಮ್ಮ ಕತೆ ಏನಾಯ್ತು ಎಂದು ಯೋಚಿಸಲಿ ಎಂದು ಟಾಂಗ್ ನೀಡಿದರು.

Key words:  no guarantee – India -alliance -will be -united- R. Ashok