Thursday, August 27, 2026

BDA Apartments

Home Front Page ಉಪಚುನಾವಣೆಯಲ್ಲಿ ಸೋತವರಿಗೆ ಮಂತ್ರಿಸ್ಥಾನ ಇಲ್ಲ- ಸಂಸದ ಶ್ರೀನಿವಾಸ್ ಪ್ರಸಾದ್ ನುಡಿ….

ಉಪಚುನಾವಣೆಯಲ್ಲಿ ಸೋತವರಿಗೆ ಮಂತ್ರಿಸ್ಥಾನ ಇಲ್ಲ- ಸಂಸದ ಶ್ರೀನಿವಾಸ್ ಪ್ರಸಾದ್ ನುಡಿ….

ಚಾಮರಾಜನಗರ,ಜ,5,2020(www.justkannada.in):  ಉಪಚುನಾವಣೆಯಲ್ಲಿ ಸೋತವರಿಗೆ ಮಂತ್ರಿ ಸ್ಥಾನ ನೀಡಲ್ಲ ಎಂದು ಚಾಮರಾಜನಗರ ಬಿಜೆಪಿ ಸಂಸದ ವಿ.ಶ್ರೀನಿವಾಸ್ ಪ್ರಸಾದ್ ಹೊಸ ಬಾಂಬ್ ಸಿಡಿಸಿದ್ದಾರೆ.

ಇಂದು ಮಾಧ್ಯಮಗಳ ಜತೆ ಮಾತನಾಡಿದ ಸಂಸದ ಶ್ರೀನಿವಾಸ್ ಪ್ರಸಾದ್, ಉಪಚುನಾವಣೆಯಲ್ಲಿ ಗೆದ್ದ ಶಾಸಕರಿಗೆ ಮಾತ್ರ ಮಂತ್ರಿ ಸ್ಥಾ ನೀಡಲಾಗುವುದು ಎಂದು ಸಿಎಂ ಬಿ.ಎಸ್. ಯಡಿಯೂರಪ್ಪ ಈಗಾಗಲೇ ಹೇಳಿದ್ದಾರೆ. ಹೀಗಾಗಿ ಸೋತವರಿಗೆ ಮಂತ್ರಿ ಸ್ಥಾನ ಇಲ್ಲ. ಚುನಾವಣೆಯಲ್ಲಿ ಗೆದ್ದು ಶಾಸಕರಾದ ಮೇಲೆ ಮಂತ್ರಿಯಾಗಬೇಕು. ಹೀಗೆ ಸುಪ್ರೀಂಕೋರ್ಟ್ ಹೇಳಿದೆ ಎಂದು ಸ್ಪಷ್ಟನೆ ನೀಡಿದರು.

ಸಚಿವ ಸಂಪುಟ ವಿಸ್ತರಣೆ ಕುರಿತು ಪ್ರತಿಕ್ರಿಯಿಸಿದ ಶ್ರೀನಿವಾಸ್ ಪ್ರಸಾದ್, ಧನುರ್ಮಾಸದ ಬಳಿಕ ಸಚಿವ ಸಂಪುಟ ವಿಸ್ತರಣೆ ನಡೆಯಲಿದೆ.ಇದೀಗ ಸರ್ಕಾರ ಬಂದಿದೆ,15 ರ ನಂತರ ಸಂಪುಟ ವಿಸ್ತರಣೆಯಾಗುತ್ತೆ ಎಂದರು.

ಇದೇ ವೇಳೆ ಮಾಜಿ ಸಚಿವ ಡಿ.ಕೆ ಶಿವಕುಮಾರ್ ವಿರುದ್ದ ವಾಗ್ದಾಳಿ ನಡೆಸಿದ ಶ್ರೀನಿವಾಸ್ ಪ್ರಸಾದ್, ಡಿ.ಕೆ ಶಿವಕುಮಾರ್ ಜೈಲಿಗೆ ಹೋಗಿ ಬಂದ ಮೇಲೆ  ಸ್ಥೀಮಿತ ಕಳೆದುಕೊಂಡಿದ್ದಾರೆ.  ಡಿಕೆ ಶಿವಕುಮಾರ್ ಹಿರಿಯ, ಅನುಭವಿ ರಾಜಕಾರಣಿ. ಆದ್ರೆ ಈಗ ಅವರ ಹೇಳಿಕೆಗೆ  ಯಾವುದೇ ಅರ್ಥ ಇಲ್ಲ ಎಂದರು.

Key words: no ministry – lose-by-election-chamarajanagr MP- Srinivas Prasad