Wednesday, August 12, 2026

BDA Apartments

Home Front Page “ಉಪಚುನಾವಣೆ ಪ್ರಚಾರಕ್ಕೆ ಡಿಕೆಶಿ ಬರುವುದು ಬೇಡ” : ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಮನವಿ

“ಉಪಚುನಾವಣೆ ಪ್ರಚಾರಕ್ಕೆ ಡಿಕೆಶಿ ಬರುವುದು ಬೇಡ” : ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಮನವಿ

ಬೆಂಗಳೂರು,ಮಾರ್ಚ್,28,2021(www.justkannada.in) : ಉಪಚುನಾವಣೆ ಪ್ರಚಾರಕ್ಕೆ ಬೆಳಗಾವಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಬರುವುದು ಬೇಡ ಕಾಂಗ್ರೆಸ್ ಅಭ್ಯರ್ಥಿ ಸತೀಶ್ ಜಾರಕಿಹೊಳಿ ಬೆಂಬಲಿಗರಿಂದ ಮನವಿ.

jk

ರಮೇಶ್ ಜಾರಕಿಹೊಳಿ ಸಿಡಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೆಸರು ಕೇಳಿಬಂದಿರುವ ಹಿನ್ನೆಲೆ, ಡಿಕೆಶಿ ಅವರು ಪ್ರಚಾರಕ್ಕೆ ಬೆಳಗಾವಿಗೆ ಬರುವುದು ಬೇಡ ಎಂದು ಸತೀಶ್ ಜಾರಕಿಹೊಳಿ ಅವರಿಗೆ ಬೆಂಬಲಿಗರು ಒತ್ತಾಯಿಸುತ್ತಿದ್ದಾರೆ.

No-need-Dikeshi-campaign-by-election-Appeal-supporters-Satish Zarakiholi

ಪ್ರಚಾರಕ್ಕೆ ಆಗಮಿಸದಂತೆ ಡಿಕೆಶಿ ಅವರಿಗೆ ಯಾರು ಹೇಳುವುದು ಎಂಬ ಗೊಂದಲ ಎದುರಾಗಿದೆ. ಪ್ರಚಾರಕ್ಕೆ ಬರುವುದರಿಂದ ಸತೀಶ್ ಜಾರಕಿಹೊಳಿ ಅವರಿಗೆ ಮುಜುಗರವಾಗಲಿದೆ ಎಂದು ತಿಳಿದು ಬಂದಿದೆ.

key words : No-need-Dikeshi-campaign-by-election-Appeal-supporters-Satish Zarakiholi