ನಮಗೆ ಸಾರ್ವಜನಿಕರ ಅಭಿಪ್ರಾಯ ಮುಖ್ಯ: ಹೊಸ ಲಿಕ್ಕರ್ ಶಾಪ್ ತೆರೆಯಲು ಅವಕಾಶವಿಲ್ಲ- ಸಿಎಂ ಸಿದ‍್ಧರಾಮಯ್ಯ.

ಮೈಸೂರು,ಅಕ್ಟೋಬರ್,7,2023(www.justkannada.in): ಗ್ರಾಮ ಪಂಚಾಯತ್ ಗಳಲ್ಲಿ‌ ಮದ್ಯದಂಗಡಿ ತೆರೆಯುವ ವಿಚಾರ ಸಂಬಂಧ, ನಮಗೆ ಸಾರ್ವಜನಿಕರ ಅಭಿಪ್ರಾಯ ಮುಖ್ಯ: ಹೊಸ ಲಿಕ್ಕರ್ ಶಾಪ್ ತೆರೆಯಲು ಅವಕಾಶವಿಲ್ಲ ಎಂದು ಸಿಎಂ ಸಿದ್ಧರಾಮಯ್ಯ ಹೇಳಿದ್ದಾರೆ .

ವಿಶೇಷ ವಿಮಾನ ಮೂಲಕ ಮೈಸೂರಿನ ಮಂಡಕಹಳ್ಳಿ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಸಿಎಂ ಸಿದ್ಧರಾಮಯ್ಯ ಅವರಿಗೆ  ಮೈಸೂರು ಜಿಲ್ಲಾಡಳಿತ ಸ್ವಾಗತ ಕೋರಿತು.  ಸಿಎಂ ಆಗಮನ ಹಿನ್ನೆಲೆ ವಿಮಾನ ನಿಲ್ದಾಣದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿತ್ತು.  ವಿಮಾನ ನಿಲ್ದಾಣದ ಬಳಿ ಪೊಲೀಸ್ ಇಲಾಖೆಯಿಂದ ಸಿಎಂ ಸಿದ್ಧರಾಮಯ್ಯ ಗೌರವವಂದನೆ ಸ್ವೀಕಾರ ಮಾಡಿದರು.  ಸಿಎಂ ಸಿದ್ದರಾಮಯ್ಯಗೆ ಸಚಿವ ಈಶ್ವರ್ ಖಂಡ್ರೆ,ಶಾಸಕ ದರ್ಶನ್ ದ್ರುವನಾರಾಯಣ್ ಸಾಥ್ ನೀಡಿದರು.

ಮದ್ಯದಂಗಡಿ ತೆರೆಯುವ ವಿಚಾರ ಸಂಬಂಧ ಕುಡಿಯುವವರನ್ನ ತಡೆಯೋದಕ್ಕೆ ಆಗುತ್ತಾ  ಎಂಬ ಡಿಸಿಎಂ ಡಿಕೆ ಶಿವಕುಮಾರ್  ಹೇಳಿಕೆ ಕುರಿತು   ಮಂಡಕಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಸಿಎಂ ಸಿದ‍್ಧರಾಮಯ್ಯ,  ಡಿಕೆ ಶಿವಕುಮಾರ್ ಅವರು ಹೊಸದಾಗಿ ಮದ್ಯದಂಗಡಿ ತೆರೆಯಲು ಅನುಮತಿ ಕೊಡ್ತೀವಿ ಅಂತ ಹೇಳಿದ್ದಾರಾ? ಡಿಕೆ ಶಿವಕುಮಾರ್ ಅವರು ತಮ್ಮ ಅಭಿಪ್ರಾಯ ಹೇಳಿದ್ದಾರೆ. ಅವರು ಅವರ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಮಗೆ ಸಾರ್ವಜನಿಕರ ಅಭಿಪ್ರಾಯ ಮುಖ್ಯ. ನನ್ನ ಪ್ರಕಾರ ಆ ಥರ ಯಾವುದೇ ಪ್ರಸ್ತಾಪ ಇಲ್ಲ. ಹೊಸ ಲಿಕ್ಕರ್ ಶಾಪ್ ತೆರೆಯಲು ಅವಕಾಶವಿಲ್ಲ. ಹೊಸ ಬಾರ್ ಲೈಸೆನ್ಸ್ ಕೊಡುವ ವಿಚಾರ ಸರ್ಕಾರದ ಮುಂದೆ ಸದ್ಯಕ್ಕೆ ಇಲ್ಲ. ಡಿ.ಕೆ‌ ಶಿವಕುಮಾರ್ ಎಲ್ಲೂ ಕೂಡ ಹೊಸ ಲೈಸೆನ್ಸ್ ಕೊಡುತ್ತೇವೆ ಎಂದು ಹೇಳಿಲ್ಲ. ಸದ್ಯಕ್ಕೆ ಆ ವಿಚಾರದಲ್ಲಿ ಯಾವ ಚರ್ಚೆಗಳು ಬೇಡ. ಜನರ ಭಾವನೆಗಳನ್ನ ನಾವು ಕೇಳಬೇಕು. ನಾನು ಸ್ಪಷ್ಟವಾಗಿ ಹೇಳುತ್ತಿದ್ದೇನೆ ಹೊಸ ಲೈಸೆನ್ಸ್ ಇಲ್ಲ ಎಂದರು.

ಮಹಿಷಾ ದಸರ ಆಚರಿಸುವುದನ್ನ ಜಿಲ್ಲಾಡಳಿತ ತೀರ್ಮಾನ ಮಾಡುತ್ತದೆ.

ಮಹಿಷ‌ ದಸರಾ ಆಚರಣೆ ಮಾಡುವ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ಧರಾಮಯ್ಯ, ಈ ಹಿಂದೆಯೂ ಮಹಿಷಾ ದಸರ ಆಚರಣೆ ಮಾಡಿದ್ದಾರೆ. ಮಹಿಷಾ ದಸರ ಆಚರಿಸುವುದನ್ನ ಜಿಲ್ಲಾಡಳಿತ ತೀರ್ಮಾನ ಮಾಡುತ್ತದೆ. ಸರ್ಕಾರದಿಂದ ಈವರಗೆ ನಾವು ಯಾವುದೇ ಅನುಮತಿ ನೀಡಿಲ್ಲ. ಮೈಸೂರು‌‌ ಜಿಲ್ಲಾಡಳಿತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ತಿಳಿಸಿದರು.

ಶಾಮನೂರು ಶಿವಶಂಕರಪ್ಪ ಹೇಳಿಕೆ ವಿಚಾರ, ನಾನು ಈ ವಿಚಾರದಲ್ಲಿ ಯಾವ ಪ್ರತಿಕ್ರಿಯೆ ನೀಡುವುದಿಲ್ಲ ಎನ್ನುವ ಮೂಲಕ ಶಾಮನೂರು ಶಿವಶಂಕರಪ್ಪ ಅವರ ಲಿಂಗಾಯತ ಹೇಳಿಕೆಯಿಂದ ದೂರ ಉಳಿದರು.

ಕೇಂದ್ರದಿಂದ ಬರ ಅಧ್ಯಯನ ವಿಚಾರ ಕುರಿತು ಪ್ರತಿಕ್ರಿಯಿಸಿದ ಸಿಎಂ ಸಿದ್ಧರಾಮಯ್ಯ, ಎಲ್ಲಾ ಹಳ್ಳಿಯ ಜನರನ್ನು ಖುದ್ದಾಗಿ ಭೇಟಿ ಮಾಡಿ ಸಮಸ್ಯೆ ಆಲಿಸಿ ಅಂಥಾ ಕೇಂದ್ರ ತಂಡಕ್ಕೆ ಕೇಳಿಕೊಂಡಿದ್ದೇನೆ. ಬರ ಪ್ರವಾಸ ಪ್ಲಾನ್ ಅವರೇ ಮಾಡಿಕೊಂಡಿದ್ದಾರೆ. ಅ ಕಡೇ ಈ ಕಡೆ ಬನ್ನಿ ಅಂಥಾ ನಾನು ನಿರ್ದೇಶನ ಮಾಡಲು ಸಾಧ್ಯವಿಲ್ಲ. ಹೊಲದಲ್ಲಿ ಹಸಿರು ಇದ್ದ ಕಾರಣಕ್ಕೆ ಅದು ಫಲ ಎಂಬ ಅರ್ಥ ಅಲ್ಲ. ಬೆಳೆ ಬರಬೇಕು ಹೀಗಾಗಿ ಹಸಿರನ್ನ ನೋಡಿ ತೀರ್ಮಾನವಾಗಬಾರದು ಎಂದು ಹೇಳಿದರು.

4500 ಕೋಟಿ ಬರ ಪರಿಹಾರ ಕೇಳಿದ್ದೇವೆ‌. ಕೇಂದ್ರ ತಂಡ ಇಲ್ಲಿಂದ ಹೀಗಿ ವರದಿ ಕೊಡುತ್ತದೆ. ವರದಿ ಆಧಾರದ ಮೇಲೆ ತೀರ್ಮಾನ ಆಗುತ್ತದೆ. ಬರಕ್ಕೂ ಗ್ಯಾರೆಂಟಿ ಯೋಜನೆಗಳಿಗೆ ಸಂಬಂಧ ಇಲ್ಲ. ಬರದ ಪರಿಸ್ಥಿತಿ ಇದ್ದರು ಗ್ಯಾರೆಂಟಿಗಳು ಎಂದಿನಂತೆ ನಡೆಯುತ್ತದೆ ಎಂದು ಸಿದ‍್ಧರಾಮಯ್ಯ ತಿಳಿಸಿದರು.

ನವೆಂಬರ್‌ನಲ್ಲಿ ಜಾತಿ ಗಣತಿ ವರದಿ ಸಲ್ಲಿಕೆ.

ನವೆಂಬರ್‌ನಲ್ಲಿ ಜಾತಿ ಗಣತಿ ವರದಿ ಸಲ್ಲಿಕೆಯಾಗಲಿದೆ.  ನಮ್ಮದು ಜಾತಿ ವ್ಯವಸ್ಥೆ ಆಧಾರಿತ ಸಮಾಜ. ಎಲ್ಲರಿಗೂ ಸಾಮಾಜಿಕ, ಆರ್ಥಿಕ, ರಾಜಕೀಯ ಸಮಾನತೆ ಕೊಡಬೇಕು. ಅದಕ್ಕೆ ಜಾತಿವಾರು ಅಂಕಿ ಅಂಶಗಳು ಬೇಕು.  ಅದಕ್ಕಾಗಿ ನಾವು ಜಾತಿಗಣತಿ ಮಾಡಿಸಿದ್ದೆವು. ಜಾತಿ ಗಣತಿ ಆದಾಗ ಕಾಂತರಾಜ್ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷರಾಗಿದ್ದರು. ಕಾಂತರಾಜ್ ವರದಿಯನ್ನು ಎಚ್.ಡಿ. ಕುಮಾರಸ್ವಾಮಿ  ತೆಗೆದುಕೊಳ್ಳಲಿಲ್ಲ. ಈಗ ಅಧ್ಯಕ್ಷರೊಂದಿಗೆ ಮಾತನಾಡಿದ್ದೇನೆ. ನವೆಂಬರ್‌ನಲ್ಲಿ ವರದಿ ಕೊಡುತ್ತೇನೆ ಅಂತ ಹೇಳಿದ್ದಾರೆ.  ವರದಿ ಸರ್ಕಾರದ ಕೈಸೇರಿದ ಮೇಲೆ ತೀರ್ಮಾನ ಮಾಡುತ್ತೇವೆ ಎಂದು ಸಿದ‍್ಧರಾಮಯ್ಯ ತಿಳಿಸಿದರು.

ಪ್ರಧಾನಿ ಮಾತು ಮಾತಿಗೂ ಸಬ್ ಕ ಸಾಥ್ ಸಬ್ ಕ ವಿಕಾಸ್ ಅಂತಾರೆ.  ಹೇಳುವುದು ಒಂದು ಮಾಡುವುದು ಮತ್ತೊಂದು. ಆಡುವ ಮಾತಿನಲ್ಲಿ ಸತ್ಯ ಇರಬೇಕು. ಆದರೆ ಜಾತಿ ಗಣತಿಯಿಂದ ಸಮಾಜ ವಿಭಜನೆ ಆಗುತ್ತೆ ಅಂತಾರೆ. ಗಣತಿಯಿಂದ ಸಮಾಜ ವಿಭಜನೆ ಆಗುತ್ತೆ ಅನ್ನೋದು ಸುಳ್ಳು ಎಂದು ಸಿಎಂ ಸಿದ್ದರಾಮಯ್ಯ ಟಾಂಗ್ ನೀಡಿದರು.

Key words: No permission -open -new liquor -shop- CM Siddaramaiah.