ಅನಿತಾ ಕುಮಾರಸ್ವಾಮಿ ಚುನಾವಣೆಯಲ್ಲಿ ಸ್ಪರ್ಧಿಸುವ ಪ್ರಶ್ನೆಯೇ ಇಲ್ಲ- ನಿಖಿಲ್ ಕುಮಾರಸ್ವಾಮಿ.

ರಾಮನಗರ,ಏಪ್ರಿಲ್,4,2023(www.justkannada.in):  ಅನಿತಾ ಕುಮಾರಸ್ವಾಮಿ ಅವರು ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಅವರು  ಸ್ಪರ್ಧಿಸುವ ಪ್ರಶ್ನಯೇ ಇಲ್ಲ ಎಂದು ಜೆಡಿಎಸ್ ಯುವ ಮುಖಂಡ ನಿಖಿಲ್ ಕುಮಾರಸ್ವಾಮಿ ತಿಳಿಸಿದ್ದಾರೆ.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ನಿಖಿಲ್ ಕುಮಾರಸ್ವಾಮಿ,  ಅನಿತಾ ಕುಮಾರಸ್ವಾಮಿ ಟಿಕೆಟ್ ಕೇಳುತ್ತಿದ್ದಾರೆ ಎಂಬುದು ಊಹಾಪೋಹ. ಅವರು ಈ ಬಾರಿ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ ಎಂದರು.

ಪಕ್ಷ ಹೇಳಿದರೇ ನಾನೇ ಚುನಾವಣಾ ಕಣದಿಂದ ಹಿಂದೆ ಸರಿಯುತ್ತೇನೆ . ಹೆಚ್.ಡಿ ಕುಮಾರಸ್ವಾಮಿ ಸಿಎಂ ಆಗುವುದು ಅನಿವಾರ್ಯ . ಅವರು  ಪಂಚರತ್ನ ಯೋಜನೆ ಜಾರಿಗೆ ತರಲು 4 ತಿಂಗಳಿಂದ ಪ್ರಯತ್ನಿಸುತ್ತಿದ್ದಾರೆ ಎಂದು ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

Key words: no question -Anita Kumaraswamy- contesting – Nikhil Kumaraswamy.