ಬಂದ್ ಗೆ ಯಾರಿಗೂ ಅವಕಾಶವಿಲ್ಲ: ಕೋರ್ಟ್ ಆದೇಶ ಮೀರಿದ್ರೆ ಕಾನೂನು ಕ್ರಮ- ಗೃಹ ಸಚಿವ ಪರಮೇಶ್ವರ್ ಎಚ್ಚರಿಕೆ.

ಬೆಂಗಳೂರು,ಸೆಪ್ಟಂಬರ್,28,2023(www.justkannada.in):  ತಮಿಳುನಾಡಿಗೆ ಕಾವೇರಿ ನೀರು ಹರಿಸದಂತೆ ಆಗ್ರಹಿಸಿ ಸರ್ಕಾರದ ವಿರುದ್ಧ ಮತ್ತು ನೀರು ಹರಿಸುವಂತೆ ಆದೇಶಿಸಿರುವ ಕಾವೇರಿ ನೀರು ನಿರ್ವಹಣಾ ಸಮಿತಿ ವಿರುದ್ಧ ನಾಳೆ ಕರ್ನಾಟಕ ಬಂದ್ ಗೆ ಕರೆ ನೀಡಲಾಗಿದ್ದು ನಾಳೆ ಸಂಪೂರ್ಣ ಸ್ತಬ್ಧವಾಗಲಿದೆ.

ಈ ಕುರಿತು ಮಾತನಾಡಿರುವ ಗೃಹಸಚಿವ ಡಾ.ಜಿ.ಪರಮೇಶ್ವರ್,  ಬಂದ್ ಗೆ ಯಾರಿಗೂ ಅವಕಾಶವಿಲ್ಲ. ಕೋರ್ಟ್ ಆದೇಶ ಮೀರಿದ್ರೆ ಕಾನೂನು ಕ್ರಮ ಕೈಗೊಳ್ಳುವುದಾಗಿ ಹೋರಾಟಗಾರರಿಗೆ ಎಚ್ಚರಿಕೆ ನೀಡಿದ್ದಾರೆ.

ಪ್ರತಿಭಟನೆ ಮಾಡಿ ಆದ್ರೆ ಬಂದ್ ಮಾಡುವಂತಿಲ್ಲ . ಬೆಂಗಳೂರು ಬಂದ್ ನಿಂದ 2 ಸಾವಿರ ಕೋಟಿ ರೂ. ನಷ್ಟವಾಗಿದೆ.  ಈಗ ಮತ್ತೆ ಬಂದ್ ಮಾಡಿದ್ರೆ ಆರ್ಥಿಕ ಸಮಸ್ಯೆ ಹೆಚ್ಚಾಗುತ್ತದೆ. ಹೀಗಾಗಿ ಬಂದ್ ಗೆ ಅವಕಾಶವಿಲ್ಲ ಎಂದಿದ್ದಾರೆ.

Key words: Not allowed- bandh-legal action – Home Minister -Parameshwar -warns.