Friday, September 11, 2026

BDA Apartments

Home Front Page ದೀಪಾವಳಿ ದಿವಾಳಿ”ಯಾಗದಿರಲಿ, ಕನ್ನಡ ಪದಬಳಕೆ ಸರಿಯಿರಲಿ: ಮೈಸೂರಿನಲ್ಲಿ ಅಭಿಯಾನ

ದೀಪಾವಳಿ ದಿವಾಳಿ”ಯಾಗದಿರಲಿ, ಕನ್ನಡ ಪದಬಳಕೆ ಸರಿಯಿರಲಿ: ಮೈಸೂರಿನಲ್ಲಿ ಅಭಿಯಾನ

ಮೈಸೂರು,ಅಕ್ಟೋಬರ್,31,2024 (www.justkannada.in): ಕರ್ನಾಟಕ ಹಿತರಕ್ಷಣಾ ವೇದಿಕೆ  ವತಿಯಿಂದ ಕನ್ನಡ ರಾಜ್ಯೋತ್ಸವ ಹಾಗೂ  ದೀಪಾವಳಿ  ಅಂಗವಾಗಿ ಡಿ. ದೇವರಾಜ ಅರಸು ರಸ್ತೆ  ವಿನೋಬ ರಸ್ತೆ ಶಿವರಾಂಪೇಟೆ ಸುತ್ತಮುತ್ತಲ ಅಂಗಡಿ  ಮುಂಗಟ್ಟುಗಳಿಗೆ ತೆರಳಿ ಗುಲಾಬಿ ಹೂವನ್ನು ನೀಡಿ ಕನ್ನಡ ಪದಗಳನ್ನು ಸರಿಯಾದ ರೀತಿಯಲ್ಲಿ  ಬಳಸುವಂತೆ ಅಭಿಯಾನ ನಡೆಸಲಾಯಿತು.

ಇತ್ತೀಚೆಗೆ ಸ್ಥಳೀಯ  ಹಬ್ಬಗಳ ಹೆಸರನ್ನು ಅಪಭ್ರಂಶಗೊಳಿಸುತ್ತಿರುವ ಉದಾಹರಣೆಗಳು ಹೆಚ್ಚುತ್ತಿವೆ. ಇತ್ತೀಚಿನ ದಿನಗಳಲ್ಲಿ ದೀಪಾವಳಿಯನ್ನು ದಿವಾಳಿ ಎಂದು ಶುಭ ಕೋರುವುದು ಹಾಗೆಯೇ ದಸರಾವನ್ನು ದುಸ್ಸೆರಾ ಎಂದು  ತಪ್ಪಾಗಿ ಶುಭಕೋರುತ್ತಿರುವುದು ಕಂಡು ಬಂದಿದೆ.   ಅನ್ಯ ಭಾಷೆ ಶೈಲಿಯಲ್ಲಿ ಪದಬಳಕೆ ಶುಭ ಕೋರುವುದು ಖಂಡನೀಯ ಅದರ ಅರ್ಥವೇ ಬೇರೆಯಿರುತ್ತದೆ, ಹಾಗಾಗಿ ಕರ್ನಾಟಕ ಹಿತ ರಕ್ಷಣಾ ವೇದಿಕೆ ವತಿಯಿಂದ ಎಲ್ಲಾ ಅಂಗಡಿ ಮುಂಗಟ್ಟುಗಳಿಗೆ ತೆರಳಿ ಗುಲಾಬಿ ನೀಡಿ ಈ ಮನವಿ ಮಾಡಿಕೊಳ್ಳಲಾಯಿತು.

ಕೆಲವು ಅಂಗಡಿ ಮುಂಗಟ್ಟುಗಳಲ್ಲಿ ದೀಪಾವಳಿಯನ್ನು ದಿವಾಳಿಯೆಂದು ಬರೆದು ಶುಭಕೋರುತ್ತಿರುವದನ್ನು  ಖಂಡಿಸಿ ಅವರಿಗೆ ತಿಳಿಹೇಳಿ ದಯಮಾಡಿ ಕನ್ನಡವನ್ನು ಸರಿಯಾಗಿ ಪ್ರಯೋಗಿಸಿ ಗೌರವಿಸಿ ಎಂದು  ಮನವಿ ಮಾಡಿಕೊಂಡರು.

ಈ ವೇಳೆ ಮಾತನಾಢಿದ ಮಾತನಾಡಿದ ಕರ್ನಾಟಕ ಹಿತ ರಕ್ಷಣಾ ವೇದಿಕೆ ಅಧ್ಯಕ್ಷ ವಿನಯ್ ಕುಮಾರ್ ದೀಪಾವಳಿ ದಿವಾಳಿ”ಯಾಗದಿರಲಿ. ಹಬ್ಬದ ದಿನಗಳು ಹತ್ತಿರ ಬರುತ್ತಿದ್ದಂತೆ ಗ್ರಾಹಕರಿಗೆ ಶುಭಾಶಯ ತಿಳಿಸಲು  ಹಲವಾರು ಉದ್ದಿಮೆಗಳು ಕನ್ನಡಿಗರಿಗೆ ಉತ್ತರ ಭಾರತದ ಭಾಷೆಯಲ್ಲೇ ‘ದಿವಾಳಿ ‘ಹಬ್ಬದ ಶುಭಾಶಯಗಳನ್ನು ತಿಳಿಸುತ್ತವೆ. ಬ್ಯಾಂಕ್‍ ಗಳು .ಅದರಲ್ಲೂ ಕರ್ನಾಟಕದಲ್ಲಿಯೇ ಹುಟ್ಟಿ ಬೆಳೆದ ಬ್ಯಾಂಕ್‍ ಗಳು .ದಿವಾಳಿ ಹಬ್ಬದ ಶುಭಾಶಯಗಳು ಎಂದು ಗ್ರಾಹಕರಿಗೆ ತಿಳಿಸುತ್ತಿರುವುದು ನೋಡಿದರೆ. ಕನ್ನಡದ ಬಗ್ಗೆ ಇವರಿಗೆಷ್ಟು ಅಭಿಮಾನವಿದೆ ಮಾಹಿತಿಯಿದೆ ಎಂಬುದರ ಬಗ್ಗೆ ಸಂದೇಹ ವ್ಯಕ್ತವಾಗುತ್ತದೆ.

ಕನ್ನಡದಲ್ಲಿ ದಿವಾಳಿ ಎಂದರೆ ಎಲ್ಲವನ್ನೂ ಕಳೆದುಕೊಳ್ಳುವುದು ಎಂದರ್ಥವಿದೆ .’ದಿವಾಳಿ ಹಬ್ಬ’ ಎಂದರೆ ಕನ್ನಡಿಗರು ಏನೆಂದು ತಿಳಿದುಕೊಳ್ಳಬೇಕು? ಅದರಲ್ಲೂ ಕನ್ನಡಿಗರು ಹಣ ಇಟ್ಟಿರುವ ಬ್ಯಾಂಕುಗಳೇ ಹೀಗೆ ಹಾರೈಸಿದರೆ! ಕನ್ನಡಿಗರಿಗೆ ಪರಿಚಯವಿರುವ ಹೆಸರುಗಳನ್ನೇ ಬಳಸಲು ತೊಂದರೆ ಏನು ? ಈ ಬಗ್ಗೆ ಕನ್ನಡ ಪ್ರಾಧಿಕಾರವು ಕ್ರಮ ಕೈಗೊಳ್ಳಲಿ ಎಂದು  ಆಗ್ರಹಿಸಿದರು.

ಇದೇ ಸಂದರ್ಭದಲ್ಲಿ ಕೆಪಿಸಿಸಿ ಸದಸ್ಯರಾದ ನಜರ್ಬಾದ್ ನಟರಾಜ್, ಗುರುರಾಜ್ ಶೆಟ್ಟಿ, ಪ್ರಮೋದ್, ನಿತಿನ್, ರವಿಚಂದ್ರ, ವರುಣ ಮಹಾದೇವ್, ಮಂಜುನಾಥ್, ವಿಶಾಲ್, ಮಂಜು, ಫಾಲ್ಕನ್ ಮಾದೇಗೌಡ, ಸೋಮಶೇಖರ್ ಆಚಾರ್ ಹಾಗೂ ಇತರರು ಹಾಜರಿದ್ದರು.

Key words: not  Diwali, Deepavali, Kannada, correct, campaign, Mysore.”