ಶಿವರಾಜ್ ಕುಮಾರ್ ಒಬ್ಬ ವ್ಯಕ್ತಿ ಪರ ಪ್ರಚಾರ ಮಾಡುತ್ತಿರುವುದು ಸರಿಯಲ್ಲ- ಸಂಸದ ಪ್ರತಾಪ್ ಸಿಂಹ.

ಮೈಸೂರು,ಮೇ,4,2023(www.justkannada.in): ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ಧರಾಮಯ್ಯ ಪರ ನಟ ಶಿವರಾಜ್ ಕುಮಾರ್ ಪ್ರಚಾರ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ್ ಸಿಂಹ ಬೇಸರ ಹೊರಹಾಕಿದ್ದಾರೆ.

ಈ ಕುರಿತು ಮಾಧ್ಯಮಗಳ ಜೊತೆ ಮಾತನಾಡಿದ ಸಂಸದ ಪ್ರತಾಪ್ ಸಿಂಹ, ಡಾ ರಾಜ್ ಕುಮಾರ್ ಕುಟುಂಬವನ್ನ ರಾಜಕೀಯ ಹೊರತಾಗಿ ನೋಡುತ್ತೇವೆ. ಡಾ.ರಾಜ್ ಕುಟುಂಬ ರಾಜಕೀಯ ಸೋಂಕು ಅಂಟಿಸಿಕೊಂಡಿರಲಿಲ್ಲ. ಶಿವಮೊಗ್ಗದಲ್ಲಿ ಯಡಿಯೂರಪ್ಪ ವಿರುದ್ಧ ಗೀತಾ ಸ್ಪರ್ಧೆ ಮಾಡಿದ್ದರು. ಆಗಲೂ ನಟ ಶಿವರಾಜ್​ ಕುಮಾರ್​ ಪ್ರಚಾರಕ್ಕೆ ಹೋಗಿರಲಿಲ್ಲ. ಡಾ.ರಾಜ್​ ಕುಟುಂಬವನ್ನು ರಾಜಕೀಯದ ಆಚೆಗೆ ನೋಡುತ್ತಾರೆ. ಶಿವಮೊಗ್ಗ ಕ್ಷೇತ್ರದಲ್ಲಿ ಗೀತಾ ಸ್ಪರ್ಧಿಸಿದಾಗಲೂ ಸರಿ ಕಾಣಲಿಲ್ಲ. ಬಿಜೆಪಿ ಸಂಸದನಾಗಿ ಈ ವಿಚಾರವನ್ನು ಹೇಳುತ್ತಿಲ್ಲ ಎಂದರು.

ಗೀತಾ ಶಿವರಾಜ್​ ಕುಮಾರ್ ರಾಜಕೀಯ ಕುಟುಂಬದಿಂದ ಬಂದಿದ್ದಾರೆ. ಅವರ ತಂದೆ ಎಸ್.ಬಂಗಾರಪ್ಪ ಸಿಎಂ ಆಗಿದ್ದವರು. ಗೀತಾ ಶಿವರಾಜ್​ ಕುಮಾರ್ ಪ್ರಚಾರಕ್ಕೆ ಬಂದರೆ ತಕರಾರು ಇಲ್ಲ ಎಂದು ಸಂಸದ ಪ್ರತಾಪ್ ಸಿಂಹ ಹೇಳಿದರು.

Key words: not right -Shivraj Kumar -campaigning -one person – MP Pratap Simha.