ಸಿದ್ಧರಾಮಯ್ಯ ಬಗ್ಗೆ ಮಾತನಾಡಲ್ಲ: ಯಾವ ಖಾತೆ ಕೊಟ್ರೂ ನಿಭಾಯಿಸಲು ಸಿದ್ಧ ಎಂದ ಬಿ.ಸಿ ಪಾಟೀಲ್ …

ಹಾವೇರಿ,ಡಿ,9,2019(www.justkannada.in):  ಹಿರೇ ಕೆರೂರು ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಬಿ.ಸಿ ಪಾಟೀಲ್  ಕಾಂಗ್ರೆಸ್ ಅಭ್ಯರ್ಥಿ ವಿರುದ್ದ ಭರ್ಜರಿ ಗೆಲುವು ಸಾಧಿಸಿದ್ದಾರೆ. ಇನ್ನು ಗೆದ್ದವರಿಗೆ ಸಚಿವ ಸ್ಥಾನ ನೀಡುವುದು ಖಚಿತ ಎಂದು ಸಿಎಂ ಬಿಎಸ್ ವೈ ಹೇಳಿದ ಬೆನ್ನಲ್ಲೆ ಯಾವುದೇ ಖಾತೆ ಕೊಟ್ಟರೂ ನಿಭಾಯಿಸಲು ಸಿದ್ಧ ಎಂದು ಬಿ.ಸಿ ಪಾಟೀಲ್ ತಿಳಿಸಿದ್ದಾರೆ.

ತಮ್ಮ ಗೆಲುವಿನ ಬಗ್ಗೆ ಸಂತಸ ವ್ಯಕ್ತಪಡಿಸಿ ಮಾತನಾಡಿದ ಬಿ.ಸಿ ಪಾಟೀಲ್, ಗೆದ್ದವರಿಗೆ ಮಂತ್ರಿ ಸ್ಥಾನ ನೀಡುವ ಭರವಸೆ ಕೊಟ್ಟಿದ್ದಾರೆ. ನನಗೆ ಇಂತಹ ಖಾತೆ ಬೇಕೆಂದು ಕೇಳುವುದಿಲ್ಲ.  ಯಾವುದೇ ಖಾತೆ ಕೊಟ್ಟರೂ ನಿಭಾಯಿಸುತ್ತೇನೆ.  ಗೃಹ,ಲೋಕೋಪಯೋಗಿ, ನೀರಾವರಿ, ಯಾವುದೇ ಖಾತೆಯಾದರೂ ಸರಿ ಕೆಲಸ ಮಾಡುತ್ತೇನೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ಇನ್ನು ಸಿದ್ಧರಾಮಯ್ಯ ಬಗ್ಗೆ ನಾನು ಮಾತನಾಡುವುದಿಲ್ಲ. ನನ್ನನ್ನ ಗೆಲ್ಲಿಸುವ ಮೂಲಕ ಕ್ಷೇತ್ರದ ಜನತೆ ಸಿದ್ಧರಾಮಯ್ಯಗೆ ಉತ್ತರ ಕೊಟ್ಟಿದ್ದಾರೆ ಎಂದು ಬಿ.ಸಿ ಪಾಟೀಲ್ ತಿಳಿಸಿದರು.

Key words: Not talking- about- Siddaramaiah-hirekerur-bjp-won-BC Patil