ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿಯಿಂದ ನೋಟಿಸ್.

ಬೆಂಗಳೂರು,ಜನವರಿ,16,2023(www.justkannada.in): ಪಕ್ಷದ ಶಿಸ್ತು ಉಲ್ಲಂಘನೆ ಮಾಡಿದ ಆರೋಪದ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ರಾಜ್ಯ ಬಿಜೆಪಿ ಶಿಸ್ತು ಸಮಿತಿ ನೋಟಿಸ್ ಜಾರಿ ಮಾಡಿದೆ.

ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಸೂಚನೆ ಮೇರೆಗೆ ಬಸನಗೌಡ ಪಾಟೀಲ್ ಯತ್ನಾಳ್ ಗೆ ನೋಟಿಸ್ ನೀಡಲಾಗಿದೆ.  ಪಕ್ಷದವರ ವಿರುದ್ದವೇ ಬಹಿರಂಗ ಹೇಳಿಕೆ ಹಿನ್ನೆಲೆ ವಿವರಣೆ ನೀಡುವಂತೆ ನೊಟೀಸ್ ಜಾರಿ ಮಾಡಲಾಗಿದೆ.

ಈ ಹಿಂದೆ  ಬಿಎಸ್ ಯಡಿಯೂರಪ್ಪ ಸಿಎಂ ಆಗಿದ್ದ ವೇಳೆಯೂ ಬಿಎಸ್ ವೈ ಮತ್ತು ಸರ್ಕಾರದ ವಿರುದ್ಧ ಮಾತನಾಡಿದ್ದಕ್ಕೆ  ನೋಟಿಸ್ ನೀಡಲಾಗಿತ್ತು. ಮತ್ತೆ ಪಕ್ಷದ ಶಿಸ್ತು ಉಲ್ಲಂಘನೆ ಮಾಡದಂತೆ ಹೈಕಮಾಂಡ್ ಸೂಚಿಸಿತ್ತು.

Key words: Notice – MLA- Basan Gowda Patil Yatnal – State- BJP -Disciplinary -Committee.