ಬೆಂಗಳೂರು ಟ್ರಾಫಿಕ್ ಗೆ  ಸಿಲುಕಿ ತುರ್ತು ಚಿಕಿತ್ಸೆ ಸಿಗದೆ ಒಂದುವರೆ ವರ್ಷದ ಮಗು ಬಲಿ.

ಬೆಂಗಳೂರು,ಫೆಬ್ರವರಿ,3,2023(www.justkannada.in): ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಪ್ರತಿಯೊಬ್ಬರೂ ಟ್ರಾಫಿಕ್​ನಿಂದ ಹೈರಾಣಾಗಿದ್ದಾರೆ. ಈ ಮಧ್ಯೆ ಟ್ರಾಫಿಕ್ ನಲ್ಲಿ ಅಂಬ್ಯುಲೆನ್ಸ್ ಸಿಲುಕಿದ ಹಿನ್ನೆಲೆ ಆಸ್ಪತ್ರೆಗೆ ರವಾನಿಸಲು ತಡವಾಗಿ ತುರ್ತು ಚಿಕಿತ್ಸೆ ಸಿಗದೆ  ಒಂದೂವರೆ ವರ್ಷದ  ಮಗು ಬಲಿಯಾದ ಮನಕಲಕುವ ನಡೆದಿದೆ.

ಅಪಘಾತದಲ್ಲಿ ಗಾಯಗೊಂಡಿದ್ದ ಒಂದೂವರೆ ವರ್ಷದ ಮಗು ಹುದಾ ಕೌಸರ್​​ ನೆಲಮಂಗಲ ಬಳಿ ಟ್ರಾಫಿಕ್​ ಜಾಮ್​ನಲ್ಲಿ ಸಿಲುಕಿಕೊಂಡು ಸರಿಯಾದ ಸಮಯಕ್ಕೆ ಆಸ್ಪತ್ರೆಗೆ ಹೋಗಲಾಗದೆ ಚಿಕಿತ್ಸೆ ಪಡೆಯಲಾಗದೆ ಮೃತಪಟ್ಟಿದೆ. ನಿನ್ನೆ ತುಮಕೂರು ಜಿಲ್ಲೆ ತಿಪಟೂರಿನ ಕೈಮರಾ ಬಳಿ ಬುಲೆರೋ ವಾಹನ ಹಾಗು ಬೈಕ್ ನಡುವೆ  ಅಪಘಾತ ಸಂಭವಿಸಿ ಅಹಮದ್​​, ರುಕ್ಸಾನಾ ದಂಪತಿ ಹಾಗೂ ಪುತ್ರಿ ಹುದಾ ಕೌಸರ್ ಗಾಯಗೊಂಡಿದ್ದರು.

ಈ ವೇಳೆ ತಂದೆ ಅಹಮದ್​​, ತಾಯಿ ರುಕ್ಸಾನಾಗೆ ತಿಪಟೂರು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗಿದ್ದು ಹೆಚ್ಚಿನ ಚಿಕಿತ್ಸೆಗಾಗಿ ಮಗುವನ್ನು ಹಾಸನ ಹಿಮ್ಸ್​​ ಗೆ ರವಾನಿಸಲಾಗಿತ್ತು. ಬಳಿಕ ಹಿಮ್ಸ್​​​ನಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಮಗುವನ್ನ ಬೆಂಗಳೂರಿಗೆ ರವಾನಿಸಲು ಆ್ಯಂಬುಲೆನ್ಸ್ ಮೂಲಕ  ತೆರಳುತ್ತಿದ್ದ ವೇಳೆ ನೆಲಮಂಗಲ ಬಳಿ ಟ್ರಾಫಿಕ್​ ಜಾಮ್ ಗೆ ಆ್ಯಂಬುಲೆನ್ಸ್ ಸಿಲುಕಿದೆ. ಟ್ರಾಫಿಕ್​ನಿಂದ ಆಸ್ಪತ್ರೆಗೆ ತೆರಳಲಾಗದೆ ಒಂದೂವರೆ ವರ್ಷದ ಹುದಾ ಮೃತಪಟ್ಟಿದ್ದಾಳೆ.  ಮಗುವನ್ನು ಕಳೆದುಕೊಂಡು ನಡು ರಸ್ತೆಯಲ್ಲೇ ಕುಟುಂಬಸ್ಥರು ಕಣ್ಣೀರಿಟ್ಟಿದ್ದಾರೆ.

Key words: old child -died – Bengaluru -traffic – emergency treatment.

..