ಇಂದಿನಿಂದ ಭಾರತ-ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ

ಬೆಂಗಳೂರು, ಜನವರಿ 19, 2021 (www.justkannada.in): ಟೆಸ್ಟ್ ಸರಣಿ ಸೋತ ಬಳಿಕ ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಯಾರಾಗುತ್ತಿದ್ದು ಸೇಡಿ ತೀರಿಸಿಕೊಳ್ಳುವ ತವಕದಲ್ಲಿದೆ.

ಇಂದು ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಣ ಮೊದಲ ಏಕದಿನ ಪಂದ್ಯ ಪಾರ್ಲ್​ನ ಬೋಲ್ಯಾಂಡ್ ಪಾರ್ಕ್​ನಲ್ಲಿ ನಡೆಯಲಿದೆ.

ಈಗಾಗಲೇ ಟೀಮ್ ಇಂಡಿಯಾ ಆಟಗಾರರು ಇಲ್ಲಿಗೆ ತಲುಪಿದ್ದು ಭರ್ಜರಿ ಅಭ್ಯಾಸದಲ್ಲಿ ನಿರತರಾಗಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ತಂಡವನ್ನು ಕೆ.ಎಲ್.ರಾಹುಲ್ ಮುನ್ನಡೆಸುತ್ತಿದ್ದಾರೆ.

ಜಸ್​ಪ್ರೀತ್ ಬುಮ್ರಾ ಉಪ ನಾಯಕನಾಗಿದ್ದಾರೆ. ಮೊದಲ ಬಾರಿಗೆ ಸಂಪೂರ್ಣ ಏಕದಿನ ಸರಣಿಯನ್ನು ಮುನ್ನಡೆಸುತ್ತಿರುವ ರಾಹುಲ್ ಅಭ್ಯಾಸದ ವೇಳೆ ತಮ್ಮ ಸಹ ಆಟಗಾರರೊಂದಿಗೆ ಗೇಮ್ ಪ್ಲಾನ್ ರೂಪಿಸಿದ್ದಾರೆ.