ವಿರೋಧ ಪಕ್ಷದ ನಾಯಕ ಯಾರು ಅಂತಾ ನಾಳೆ ತಿಳಿಯಲಿದೆ- ಮಾಜಿ ಸಿಎಂ ಬಸವರಾಜ ಬೊಮ್ಮಾಯಿ.

ಚಿಕ್ಕಮಗಳೂರು,ಜುಲೈ,1,2023(www.justkannada.in):  ಜುಲೈ 3 ರಿಂದ ರಾಜ್ಯ ವಿಧಾನಸಭಾ ಅಧಿವೇಶನ ಪ್ರಾರಂಭವಾಗಲಿದ್ದು ಇದಕ್ಕೂ ಮುನ್ನ ವಿಪಕ್ಷ ನಾಯಕರ ಆಯ್ಕೆಯಾಗಬೇಕಿದೆ.

ಈ ಕುರಿತು ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ, ವಿರೋಧ ಪಕ್ಷದ ನಾಯಕ ಯಾರು ಎಂದು ನಾಳೆ ಗೊತ್ತಾಗಲಿದೆ ಎಂದು ಹೇಳಿದ್ದಾರೆ.

ಮಾಜಿ ಸಚಿವ ಆರ್​.ಅಶೋಕ್ ಹುಟ್ಟುಹಬ್ಬಕ್ಕಾಗಿ ಇಲ್ಲಿಗೆ ಬಂದಿದ್ದೇವೆ. ಸಮಯ ಸಿಕ್ತು, ಹಾಗಾಗಿ ಹುಟ್ಟುಹಬ್ಬ ಆಚರಿಸಲು ಬಂದಿದ್ದೇವೆ. ಹುಟ್ಟುಹಬ್ಬ ಆಚರಣೆ ಮಾಡಿ ಈಗ ವಾಪಸ್ ತೆರಳುತ್ತಿದ್ದೇವೆ ಎಂದು  ಹೇಳಿದರು.

Key words: opposition leader – tomorrow-Former CM- Basavaraja Bommai.