ಬೆಂಗಳೂರು,ಮೇ,2,2025 (www.justkannada.in): ಮಂಗಳೂರಿನಲ್ಲಿ ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ಬಂಧಿಸಲು 4 ವಿಶೇಷ ತಂಡಗಳನ್ನು ರಚಿಸಲಾಗಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.
ಈ ಕುರಿತು ಇಂದು ಮಾತನಾಡಿದ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಮಂಗಳೂರಿನಲ್ಲಿ ನಿನ್ನೆ ಸಂಜೆ ಸುಹಾಸ್ ಶೆಟ್ಟಿ ಎಂಬುವವರ ಹತ್ಯೆಯಾಗಿದೆ. ನಾವು ಈಗಾಗಲೇ ಅದನ್ನು ಗಮನಿಸಿದ್ದು, ಆರೋಪಿಗಳನ್ನ ಬಂಧಿಸಲು ನಾವು 4 ವಿಭಿನ್ನ ತಂಡಗಳನ್ನು ರಚಿಸಿದ್ದೇವೆ. ನಾವು ಅವರನ್ನು ಕಾನೂನಿನ ವ್ಯಾಪ್ತಿಗೆ ತರಲಿದ್ದೇವೆ ಎಂದರು.
ದಕ್ಷಿಣ ಕನ್ನಡದಲ್ಲಿ ನಾವು ಸಾಕಷ್ಟು ಶಾಂತಿ ಮತ್ತು ಸಾಮರಸ್ಯವನ್ನು ತರಲು ಪ್ರಯತ್ನಿಸುತ್ತೇವೆ. ಈ ರೀತಿಯ ಘಟನೆಗಳು ಆ ಶಾಂತಿ ಮತ್ತು ಸಾಮರಸ್ಯಕ್ಕೆ ಅಡ್ಡಿಯಾಗಬಾರದು. ಈ ಹಿನ್ನೆಲೆಯಲ್ಲಿ ಈ ಬಗ್ಗೆ ನಾವು ತುಂಬಾ ಗಂಭೀರವಾಗಿ ಪರಿಗಣಿಸಿದ್ದೇವೆ ಎಂದು ಪರಮೇಶ್ವರ್ ಹೇಳಿದರು.
Key words: Suhas Shetty, murder case, 4 special teams, Home Minister, Parameshwar