ಪರಮೇಶ್ವರ್ ಸುದೀರ್ಘವಾಗಿ ಕಾಂಗ್ರೆಸ್ ಪಕ್ಷ ಕಟ್ಟಿದ್ದಾರೆ: ಅವರು ಪಕ್ಷದ ಆಸ್ತಿ- ಡಿ.ಕೆ ಶಿವಕುಮಾರ್

ಬೆಂಗಳೂರು,ಫೆಬ್ರವರಿ,3,2023(www.justkannada.in): ತಮ್ಮ ನಡೆ ಬಗ್ಗೆ ಮಾಜಿ ಡಿಸಿಎಂ ಡಾ.ಜಿ.ಪರಮೇಶ್ವರ್ ಅಸಮಾಧಾನ ವಿಚಾರ ಕುರಿತು ಪ್ರತಿಕ್ರಿಯಿಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಆಸ್ತಿ: ಸುದೀರ್ಘವಾಗಿ ಪಕ್ಷ ಕಟ್ಟಿದ್ದಾರೆ ಎಂದಿದ್ದಾರೆ.

ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಡಿ.ಕೆ ಶಿವಕುಮಾರ್,  ಬೆಂಗಳೂರು ವಿಚಾರವಾಗಿ ಪರಮೇಶ್ವರ್ ಹಾಗೂ ರಣದೀಪ್ ಸಿಂಗ್ ಸುರ್ಜೇವಾಲ ಇಬ್ಬರು ನಾಯಕರು ಭೇಟಿಯಾಗಿದ್ದಾರೆ. ಬೆಂಗಳೂರುಟ್ರಾಫಿಕ್ ವಿಚಾರವಾಗಿ ಸುರ್ಜೇವಾಲ ಭೇಟಿಯಾಗಿದ್ದಾರೆ.ಸಿಂಗಾಪುರಕ್ಕೆ ಒಂದು ತಂಡವನ್ನ ಕಳಿಸುವ  ನಿರ್ಧಾರ ಮಾಡಿದ್ದೇವೆ. ಪರಮೇಶ್ವರ್ ನೇತೃತ್ವದಲ್ಲಿ ತಂಡ ಸಿಂಗಾಪುರಕ್ಕೆ  ಹೋಗಲಿದೆ. ಅದರ ಬಗ್ಗೆ ಸುರ್ಜೇವಾಲ ಪರಮೇಶ್ವರ್ ಚರ್ಚೆ ಮಾಡಿದ್ದಾರೆ ಎಂದರು.

ಬಿಜೆಪಿ ಸರ್ಕಾರ ಭ್ರಷ್ಟಾಚಾರದಲ್ಲೇ ಮುಳುಗಿ ಹೋಗಿದೆ. ಬಿಜೆಪಿ ಸರ್ಕಾರಕ್ಕೆ ಇನ್ನು 50 ದಿನ ಮಾತ್ರ ನಾನು ಈಗಾಗಲೇ 2ಬಾರಿ ಸರ್ವೇ ಮಾಡಿಸಿದ್ದೇನೆ ಎಂದರು.

Key words: Parameshwar – Congress – long time-D,K Shivakumar