ನನಗೆ ಪಕ್ಷ ಮುಖ್ಯ: ಪಕ್ಷ ಹೇಳಿದ ಕೆಲಸ ಮಾಡುತ್ತೇವೆ-ಕಾಂಗ್ರೆಸ್ ಗೆ ಸಚಿವ ಶ್ರೀರಾಮುಲು ತಿರುಗೇಟು.

ಬೆಳಗಾವಿ,ಡಿಸೆಂಬರ್,27,2022(www.justkannada.in): ಮಾಜಿ ಸಚಿವ ಜನಾರ್ಧನ ರೆಡ್ಡಿ ಹೊಸ ಪಕ್ಷ ಘೋಷಣೆ ಮಾಡಿದ ವಿಚಾರಕ್ಕೆ ಸಂಬಂಧಿಸಿದಂತೆ ಪಕ್ಷ ಮುಖ್ಯವೋ ಸ್ನೇಹ ಮುಖ್ಯವೂ ಎಂದು ತಮ್ಮ ಕಾಲೆಳೆದು ಪ್ರಶ್ನಿಸಿದ್ದ ಕಾಂಗ್ರೆಸ್ ಗೆ ಸಾರಿಗೆ ಸಚಿವ ಶ್ರೀರಾಮುಲು ತಿರುಗೇಟು ನೀಡಿದ್ದಾರೆ.

ಈ ಕುರಿತು ಮಾತನಾಡಿರುವ ಸಚಿವ ಶ್ರೀರಾಮುಲು,  ನಮ್ಮದು ರಾಷ್ಟ್ರೀಯ ಪಕ್ಷ.  ಬಿಜೆಪಿ ನನಗೆ ತಾಯಿ ಇದ್ದಂತೆ. ಪಕ್ಷ ನನಗೆ ಇಷ್ಟೊಂದು ಸ್ಥಾನಮಾನ ನೀಡಿದೆ. ಸ್ನೇಹ ಹಾಗೂ ರಾಜಕಾರಣ ಒಂದೇ ತಟ್ಟೆಯಲ್ಲಿ ತೂಗಬೇಡಿ. ಕಾಂಗ್ರೆಸ್ ನವರು ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ನಮ್ಮ ಪಕ್ಷದ ಸಿದ್ದಾಂತಗಳೇ ಬೇರೆ,  ಸ್ನೇಹವೇ ಬೇರೆ. ನಾನ್ಯಾಕೆ ರೆಡ್ಡಿಯವರ ಜೊತೆ ಹೋಗಲಿ ನನಗೆ ಪಕ್ಷ ಮುಖ್ಯ. ಪಕ್ಷ ಹೇಳಿದ ಕೆಲಸ ಮಾಡುತ್ತೇವೆ. ಜನಾರ್ದನ ರಡ್ಡಿಗೆ ಒಳ್ಳಯದಾಗಲಿ ಎಂದು ಪ್ರಾರ್ಥಿಸುತ್ತೇನೆ ಎಂದರು.treat-rate-health-minister-sriramulu-warning-private-hospitals

ಗಂಗಾವತಿಯಲ್ಲಿ ಜನಾರ್ಧನರೆಡ್ಡಿ ವಿರುದ್ಧ ಪ್ರಚಾರ ವಿಚಾರ ಕುರಿತು ಪ್ರತಿಕ್ರಿಯಿಸಿದ ಶ್ರೀರಾಮುಲು,  ನಮ್ಮ ಪಕ್ಷ ಏನೇ ಕೆಲಸ ಹೇಳಿದರೂ ಮಾಡುವೆ. ನಮ್ಮ ಉದ್ದೇಶ ಕಾಂಗ್ರೆಸ್ ಮುಕ್ತ ಆಗಬೇಕು. ಬಿಜೆಪಿ ಸರ್ಕಾರ ಮತ್ತೆ ಅಧಿಕಾರಕ್ಕೆ ಬರಬೇಕು ಎಂದರು.

Key words: Party – important -Minister -Sriramulu – Congress.