ಕರ್ನಾಟಕದಲ್ಲಿ ಬಿಜೆಪಿ ಪರ ತೆಲುಗು ನಟ ಪವನ್ ಕಲ್ಯಾಣ್ ಪ್ರಚಾರ.

ಬಳ್ಳಾರಿ,ಏಪ್ರಿಲ್,11,2024 (www.justkannada.in): ಲೋಕಸಭಾ ಚುನಾವಣಾ ಕಣ ರಂಗೇರಿದ್ದು ಎಲ್ಲಾ ಪಕ್ಷಗಳು ಅಬ್ಬರದ ಪ್ರಚಾರದಲ್ಲಿ ತೊಡಗಿವೆ.  ಈ ಮಧ್ಯೆ ತೆಲುಗು ಚಿತ್ರರಂಗದ ಖ್ಯಾತ ನಟ ಪವನ್ ಕಲ್ಯಾಣ್ ಅವರು ಕರ್ನಾಟಕದಲ್ಲಿ ಪ್ರಚಾರ ನಡೆಸಲಿದ್ದಾರೆ.

ಹೌದು ನಟ ಪವನ್ ಕಲ್ಯಾಣ್ ಕರ್ನಾಟಕದ ಆಂಧ್ರದ ಗಡಿಭಾಗದ  ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದಾರಂತೆ. ಏಪ್ರಿಲ್ 17 ರಂದು ಬಳ್ಳಾರಿ, ರಾಯಚೂರು, ಚಿಕ್ಕಬಳ್ಳಾಪುರದಲ್ಲಿ ಬಿಜೆಪಿ ಪರ ನಟ ಪವನ್ ಕಲ್ಯಾಣ್ ಮತಯಾಚನೆ ಮಾಡಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

Key words: Pawan Kalyan, campaigning, BJP