Thursday, August 6, 2026

BDA Apartments

Home Front Page ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಕಾಂಗ್ರೆಸ್ ನಲ್ಲೇ ಕೆಲವರಿಗೆ ಖುಷಿ- ಜಗದೀಶ್ ಶೆಟ್ಟರ್

ಸಿಎಂ ವಿರುದ್ಧ ಪ್ರಾಸಿಕ್ಯೂಷನ್ ಗೆ ಅನುಮತಿ: ಕಾಂಗ್ರೆಸ್ ನಲ್ಲೇ ಕೆಲವರಿಗೆ ಖುಷಿ- ಜಗದೀಶ್ ಶೆಟ್ಟರ್

ಹುಬ್ಬಳ್ಳಿ,ಆಗಸ್ಟ್, 17,2024 (www.justkannada.in): ಮುಡಾ ಹಗರಣಕ್ಕೆ ಸಂಬಂಧಿಸಿದಂತೆ  ಸಿಎಂ ಸಿದ್ದರಾಮಯ್ಯ ವಿರುದ್ದ ರಾಜ್ಯಪಾಲರು ಪ್ರಾಸಿಕ್ಯೂಷನ್ ಗೆ ಅನುಮತಿ ನೀಡಿರುವುದಕ್ಕೆ ಕಾಂಗ್ರೆಸ್ ನಲ್ಲೇ ಕೆಲವರಿಗೆ ಖುಷಿಯಾಗಿದೆ ಎಂದು ಸಂಸದ ಜಗದೀಶ್ ಶೆಟ್ಟರ್ ಲೇವಡಿ ಮಾಡಿದರು.

ಈ ಕುರಿತು ಇಂದು ಮಾತನಾಡಿದ ಜಗದೀಶ್ ಶೆಟ್ಟರ್, ಮುಡಾ ಹಗರಣದಲ್ಲಿ ಸಿಎಂ ಸಿದ್ದರಾಮಯ್ಯ ನೇರವಾಗಿ ಭಾಗಿಯಾಗಿದ್ದಾರೆ. ನೇರವಾಗಿಯೇ ಮುಡಾದಲ್ಲಿ ಸಿಎಂ ಕೈವಾಡವಿದೆ. ಹೀಗಾಗಿ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿ ಮನೆಗೆ ಹೋಗಬೇಕು ಎಂದರು.

ಸಿದ್ದರಾಮಯ್ಯ ವಿರುದ್ದ ಪ್ರಾಸಿಕ್ಯೂಷನ್ ಅನುಮತಿ ನೀಡಿದ್ದಕ್ಕೆ ಕಾಂಗ್ರೆಸ್ ನಲ್ಲೇ ಖುಷಿ ಇದೆ. ಕೆಲ ಕಾಂಗ್ರೆಸ್ ನಾಯಕರಿಗೆ ಖುಷಿಯಾಗಿದೆ ಎಂದರು.

Key words: Permission, prosecution, against, CM, Jagdish Shettar