RSS ಪಥ ಸಂಚಲನಕ್ಕೆ ಅನುಮತಿ ಕೋರಿ ಅರ್ಜಿ: ಮತ್ತೊಂದು ಸಭೆಗೆ ಸೂಚನೆ: ವಿಚಾರಣೆ ಮುಂದೂಡಿಕೆ

ಕಲಬುರಗಿ, ಅಕ್ಟೋಬರ್ 30,2025 (www.justkannada.in): ಕಲಬುರ್ಗಿ ಜಿಲ್ಲೆಯ ಚಿತ್ತಾಪುರದಲ್ಲಿ ಆರ್‌ಎಸ್‌ಎಸ್ ಪಥ ಸಂಚಲನಕ್ಕೆ ಅನುಮತಿ ಕೋರಿ ಸಲ್ಲಿಸಿದ್ದ ರಿಟ್ ಅರ್ಜಿ  ವಿಚಾರಣೆ ನಡೆಸಿದಕಲಬುರ್ಗಿ ಹೈಕೋರ್ಟ್ ಪೀಠವು ನವೆಂಬರ್ 5ರಂದು ಮಧ್ಯಾಹ್ನ 3 ಗಂಟೆಗೆ ಅಡ್ವಕೇಟ್ ಜನರಲ್ ಕಚೇರಿಯಲ್ಲಿಯೇ ಮತ್ತೊಂದು ಸಭೆ ನಡೆಸಲು ಸೂಚಿಸಿ ವಿಚಾರಣೆಯನ್ನು ನವೆಂಬರ್ 7ಕ್ಕೆ ಮುಂದೂಡಿಕೆ ಮಾಡಿದೆ.

ಚಿತ್ತಾಪುರದಲ್ಲಿ ಆರ್‌ಎಸ್‌ಎಸ್‌ ಪಥಸಂಚನಲಕ್ಕೆ ಅನುಮತಿ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಇಂದು (ಅಕ್ಟೋಬರ್ 30) ವಿಚಾರಣೆ ನಡೆಸಿದ ಕಲಬುರಗಿ ಹೈಕೋರ್ಟ್   ವಿಭಾಗೀಯ ಪೀಠ ನವೆಂಬರ್ 5 ರಂದು ಮತ್ತೊಂದು ಶಾಂತಿ ಸಭೆ ಮಾಡಲು ಸೂಚಿಸಿದೆ. ಹೀಗಾಗಿ ನವೆಂಬರ್ 2ರಂದು ಚಿತ್ತಾಪುರದಲ್ಲಿ ಪಥಸಂಚಲನ ನಡೆಸಲು ಮುಂದಾಗಿದ್ದ ಆರ್​​ಎಸ್​ಎಸ್​ಗೆ ಹಿನ್ನಡೆಯಾದಂತಾಗಿದೆ.

ನವೆಂಬರ್ 5ರಂದು ಅರ್ಜಿದಾರರು, ಅವರ ವಕೀಲರೊಂದಿಗೆ ಶಾಂತಿ ಸಭೆ ನಡೆಸಲು ಸೂಚಿಸಲಾಗಿದ್ದು, ಇಂತಹ ಘಟನೆಯಾದಾಗ ಪರಿಹಾರ ಹೇಗಿರಬೇಕೆಂಬುದಕ್ಕೆ ಇದು ಮಾರ್ಗಸೂಚಿಯಾಗಬೇಕು ಎಂದು ನ್ಯಾಯಮೂರ್ತಿ ಎಂ.ಜಿ.ಎಸ್.ಕಮಲ್​ ಅವರು ಸರ್ಕಾರ, ಅರ್ಜಿದಾರರಿಗೆ ತಿಳಿಸಿದ್ದಾರೆ.

ಸರ್ಕಾರದ ಪರ ವಾದ ಮಂಡಿಸಿದ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ, ಶಾಂತಿ ಸಭೆಗೆ ರಿಟ್ ಅರ್ಜಿದಾರರೇ ಹಾಜರಾಗಿರಲಿಲ್ಲ . ವಿವಾದವನ್ನು ಶೀಘ್ರ ಮುಗಿಸಲು ಅರ್ಜಿದಾರರೇ ಸಹಕರಿಸುತ್ತಿಲ್ಲ. ಅರ್ಜಿದಾರರ ಬದಲಿಗೆ ಬೇರೆ ವ್ಯಕ್ತಿಗಳು ಹಾಜರಾಗಿದ್ದಾರೆ ಎಂದು

ಅರ್ಜಿದಾರರ ಪರ ವಾದ ಮಂಡಿಸಿದ ವಕೀಲ ಅರುಣ್ ಶ್ಯಾಮ್,  ಅರ್ಜಿದಾರರ ಮನೆಯಲ್ಲಿ ಸಾವು ಸಂಭವಿಸಿದ್ದರಿಂದ ಶಾಂತಿ ಸಭೆಗೆ ಅವರು ಬಂದಿರಲಿಲ್ಲ ಎಂದು ಹೇಳಿದರು.

Key words: permission, RSS, road march, High court, Hearing, adjourned