NIA ದಾಳಿ ಖಂಡಿಸಿ ಕೇರಳದಲ್ಲಿ ಪಿಎಫ್ ಐ ಪ್ರತಿಭಟನೆ: ಬಸ್ ಗಳ ಮೇಲೆ ಕಲ್ಲು ತೂರಾಟ.

ಕೇರಳ,ಸೆಪ್ಟಂಬರ್,23,2022(www.justkannada.in):  ದೇಶಾದ್ಯಂತ ಪಿಎಫ್ ಐ ಮುಖಂಡರ ಮನೆ , ಕಚೇರಿ ಮೇಲೆ   ಎನ್ ​​ಐಎ ದಾಳಿ ನಡೆಸಿದ್ದನ್ನು ಖಂಡಿಸಿ ಕೇರಳದಲ್ಲಿ ಪಿಎಫ್ ಐ ಪ್ರತಿಭಟನೆ ನಡೆಸಿ ಬಸ್ ಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

ಕೇರಳದ ಕೊಲ್ಲಂನಲ್ಲಿ ಪ್ರತಿಭಟನೆಯು ಹಿಂಸಾಚಾರಕ್ಕೆ ತಿರುಗಿದ್ದು, ಬಸ್​ಗಳ​​ ಮೇಲೆ PFI ಕಾರ್ಯಕರ್ತರು ಕಲ್ಲು ತೂರಾಟ ನಡೆಸಿದ್ದಾರೆ.  ಕೆಎಸ್‌ಆರ್‌ಟಿಸಿ ಬಸ್‌ಗಳು ಸೇರಿದಂತೆ ಹಲವು ವಾಹನಗಳ ಮೇಲೆ ಪ್ರತಿಭಟನಾಕಾರರು ವಿವಿಧೆಡೆ ದಾಳಿ ನಡೆಸಿದ್ದಾರೆ. ಅನೇಕ ಕಾರ್ಯಕರ್ತರನ್ನ ಈಗಾಗಲೇ ಪೊಲೀಸರು ಬಂಧಿಸಿದ್ದಾರೆ.

ಪಿಎಫ್ ಐ ಪ್ರತಿಭಟನೆ ಹಿನ್ನೆಲೆ  ಕೇರಳ ಪೊಲೀಸರು ರಾಜ್ಯದಲ್ಲಿ ಭದ್ರತೆಯನ್ನು ಹೆಚ್ಚಿಸಿದ್ದು, ಕಾನೂನು ಮತ್ತು ಸುವ್ಯವಸ್ಥೆಯನ್ನು ಕಾಪಾಡಲು ಜಿಲ್ಲಾ ಪೊಲೀಸ್ ಮುಖ್ಯಸ್ಥರಿಗೆ ನಿರ್ದೇಶನಗಳನ್ನು ನೀಡಿದ್ದಾರೆ.

ನಿನ್ನೆ ದೇಶಾದ್ಯಂತ 10ಕ್ಕೂ ಹೆಚ್ಚು ರಾಜ್ಯಗಳಲ್ಲಿ ಪಿಎಫ್ ಐ ,ಮತ್ತು ಎಸ್ ಡಿಪಿಐ ನಾಯಕರ ಮನೆ, ಕಚೇರಿ ಮೇಲೆ ಎನ್ ಐಎ ದಾಳಿ ನಡೆಸಿತ್ತು. ಹಲವು ಮುಖಂಡರನ್ನ ವಶಕ್ಕೆ ಪಡೆದು ವಿಚಾರಣೆ ನಡೆಸಿತ್ತು.

Key words: PFI -protest – Kerala- condemning -NIA -attack