ಬೆಂಗಳೂರು,ಜೂನ್,30,2026 (www.justkannada.in): ರಾಜ್ಯ ಸರ್ಕಾರ ನಿರ್ಮಿಸಲು ಹೊರಟಿರುವ ಬಿಡದಿ ಟೌನ್ ಶಿಪ್ ಪ್ರಶ್ನಿಸಿ ಹೈಕೋರ್ಟ್ ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ(PIL) ಸಲ್ಲಿಕೆಯಾಗಿದೆ.
ಮೈಸೂರಿನ ರಾಜೇಶ್ ಕೆ.ಬಿ ಎಂಬುವವರು ಬಿಡದಿ ಟೌನ್ ಶಿಪ್ ಪ್ರಶ್ನಿಸಿ ಹೈಕೋರ್ಟ್ ಗೆ ಪಿಐಎಲ್ ಸಲ್ಲಿಸಿದ್ದಾರೆ.
3 ಗ್ರಾಮಗಳ ಒಟ್ಟು 519 ಎಕೆರೆ ಭೂಸ್ವಾಧೀನಕ್ಕೆ ಅಂತಿಮ ಅಧಿಸೂಚನೆ ಹೊರಡಿಸಲಾಗಿದೆ. ಇದರಿಂದ ಕೃಷಿ ಭೂಮಿಗಳ ಸ್ವಾಧೀನದಿಂದ ಜನರ ಮೂಲಭೂತ ಹಕ್ಕಿಗೆ ಧಕ್ಕೆಯಾಗಿದೆ. ಹೀಗಾಗಿ ಬಿಡದಿ ಟೌನ್ ಶಿಪ್ ಭೂಸ್ವಾಧೀನ ರದ್ದುಪಡಿಸಿ ಎಂದು ಅರ್ಜಿಯಲ್ಲಿ ಮನವಿ ಮಾಡಿದ್ದಾರೆ.
Key words: PIL, High Court, challenging, Bidadi Township







