ತೆಲಂಗಾಣದಲ್ಲಿ ವಂದೇ  ಭಾರತ್ ರೈಲಿಗೆ ಪ್ರಧಾನಿ ಮೋದಿ ಚಾಲನೆ.

ಹೈದರಾಬಾದ್,ಏಪ್ರಿಲ್,8,2023(www.justkannada.in): ಸಿಕಂದರಾಬಾದ್-ತಿರುಪತಿ ನಡುವಿನ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಚಾಲನೆ ನೀಡಿದರು.

ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತೆಲಂಗಾಣಕ್ಕೆ ಭೇಟಿ ನೀಡಿದ್ದರು. ಈ ವೇಳೆ ವಂದೇ ಭಾರತ್ ರೈಲಿಗೆ ಹಸಿರು ನಿಶಾನೆ ತೋರಿಸಿದ್ದಾರೆ. ಈ ಮಾರ್ಗದಲ್ಲಿ ಸೆಮಿ-ಹೈಸ್ಪೀಡ್ ರೈಲು ಲೋಕೋಮೋಟಿವ್ ನ 12 ನೇ ಘಟಕವಾಗಲಿದೆ.

ಪ್ರಧಾನಿ ಮೋದಿ ಅವರು ಹೈದರಾಬಾದ್ ಸಮೀಪದ ಬೀಬಿನಗರದ ಏಮ್ಸ್ ಹಾಗೂ ಐದು ರಾಷ್ಟ್ರೀಯ ಹೆದ್ದಾರಿ ಯೋಜನೆಗಳಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

Key words: PM Modi- Vande Bharat -train -Telangana.