Saturday, September 5, 2026

BDA Apartments

Home Front Page ಸಿಎಂ ಪದಗ್ರಹಣ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್, ವಾಹನ ಸಂಚಾರ ಬದಲಾವಣೆ

ಸಿಎಂ ಪದಗ್ರಹಣ ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್, ವಾಹನ ಸಂಚಾರ ಬದಲಾವಣೆ

ಬೆಂಗಳೂರು,ಜೂನ್,2,2026 (www.justkannada.in): ನಾಳೆ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್ ಪ್ರಮಾಣವಚನ ಸ್ವೀಕಾರ ಮಾಡಲಿದ್ದು ಕಾರ್ಯಕ್ರಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತ್ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಮಾಹಿತಿ ನೀಡಿದ್ದಾರೆ.

ಈ ಕುರಿತು ಮಾತನಾಡಿದ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಸಿಎಂ ಪ್ರಮಾಣ ವಚನ ಸ್ವೀಕಾರ ಹಿನ್ನೆಲೆ. ಕಾರ್ಯಕ್ರಮಕ್ಕೆ ಪೊಲೀಸ್ ಬಿಗಿ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ. ಭದ್ರತೆ ಕುರಿತು ಪೊಲೀಸ್  ಅಧಿಕಾರಿಗಳ ಜೊತೆ ಸಭೆ ನಡಸಲಾಗಿದೆ. ಸಂಚಾರ ಕಾನೂನು ಸುವ್ಯವಸ್ಥೆ ಪೊಲೀಸ್ ಅಧಿಕಾರಿಗಳ ಜೊತೆ ಸಭೆ ನಡೆಸಲಾಗಿದೆ. ಲೋಕಭವನಕ್ಕೆ ಪಾಸ್ ಇದ್ದವರಿಗೆ ಮಾತ್ರ ಅವಕಾಶ ನೀಡಲಾಗಿದೆ.  ವಿವಿಧ ರೀತಿಯಲ್ಲಿ ಕಾರ್ಯಕ್ರಮಕ್ಕೆ ಪಾಸ್ ಹಂಚಿಕೆ ಮಾಡಲಾಗಿದೆ. ಪಾಸ್ ಹಂಚಿಕೆ ಬಗ್ಗೆ ಸಂಪೂರ್ಣ ಮಾಹಿತಿ ಪಡೆದುಕೊಂಡಿದ್ದೇವೆ ಎಂದರು.

ಸಂಚಾರ ಮಾರ್ಗದಲ್ಲಿ ಕೆಲವೊಂದು ಬದಲಾವಣೆ ಮಾಡಿದ್ದೇವೆ. ರೋಡ್ ಶೋ ನಡೆಸುವುದರ ಬಗ್ಗೆ ಯಾವುದೇ ಮಾಹಿತಿ ಇಲ್ಲ.  ಹೊರ ರಾಜ್ಯದಿಂದಲೂ ವಿಐಪಿಗಳು ಕಾರ್ಯಕ್ರಮಕ್ಕೆ ಬರುತ್ತಿದ್ದಾರೆ.  ಗಣ್ಯರ ಭದ್ರತೆಗೂ ಕ್ರಮ ವಹಿಸಲಾಗಿದೆ ಎಂದು ಸೀಮಂತ್ ಕುಮಾರ್ ಸಿಂಗ್ ತಿಳಿಸಿದರು.

ಹಾಗೆಯೇ ಲೋಕಭವನ ಸುತ್ತ ಮುತ್ತ ವಾಹನ ಸಂಚಾರ ಬದಲಾವಣೆ ಮಾಡಲಾಗಿದ್ದು ನಾಳೆ ಕೇಂದ್ರ ಭಾಗದಲ್ಲಿ ಸಂಚಾರ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.

Key words: Police, tight, security , CM, swearing, ceremony ,Police Commissioner