ಪವರ್ ಟಿವಿ ವಾಹಿನಿ ಲೈವ್ ಬಂದ್ ತೆರವು ಮಾಡಿಸಿ ನ್ಯಾಯ ದೊರಕಿಸಿ- ಸಿಎಂಗೆ ಶಿವಾನಂದ ತಗಡೂರು ಮನವಿ…

ಬೆಂಗಳೂರು,ಸೆಪ್ಟಂಬರ್,29,2020(www.justkannada.in): ಮುಖ್ಯಮಂತ್ರಿ  ಬಿ.ಎಸ್ ಯಡಿಯೂರಪ್ಪ, ಪುತ್ರ ಬಿ.ಎಸ್ .ವಿಜಯೇಂದ್ರರ ವಿರುದ್ದ ಭ್ರಷ್ಟಾಚಾರದ ಆರೋಪದ ಸುದ್ದಿಯನ್ನು ನಿರಂತರ ಬಿತ್ತರಮಾಡಿ ಸರಕಾರಕ್ಕೆ ಸವಾಲ್ ಹಾಕಿದ್ದ ” ಪವರ್ ಟಿವಿ” ಯ ಆನ್ ಏರ್  ಸ್ಥಗಿತಗೊಳಿಸಲಾಗಿದೆ.jk-logo-justkannada-logo

ಈ ಕುರಿತು  ಸಿಎಂ ಬಿಎಸ್ ಯಡಿಯೂರಪ್ಪಗೆ ಮನವಿ ಮಾಡಿರುವ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಪವರ್ ಟಿವಿ ವಾಹಿನಿ ಲೈವ್ ಬಂದ್ ಮಾಡಿರುವುದು ಸರಿಯಾದ ಕ್ರಮ ಅಲ್ಲ. ಇದೇ ಟಿವಿ ಮಾಲೀಕರ ಮೇಲೆ ಆರೋಪ ಬೇರೆ ವಿಚಾರ. ತನಿಖೆ ನಡೆಸುವುದಕ್ಕೆ ಅಭ್ಯಂತರವಿಲ್ಲ. ಆದರೆ, ಒಂದು ಟಿವಿ ವಾಹಿನಿ ಲೈವ್ ಬಂದ್ ಮಾಡುವುದರಿಂದ ಅದನ್ನು ಅವಲಂಬಿಸಿ ವೃತ್ತಿ ಮಾಡುತ್ತಿರುವ ನೂರಾರು ಪತ್ರಕರ್ತರ ಕುಟುಂಬಗಳು ಬೀದಿಗೆ ಬರುತ್ತವೆ ಎಂದು  ಬೇಸರ ವ್ಯಕ್ತಪಡಿಸಿದ್ದಾರೆ.

ಆದ್ದರಿಂದ ತಾವು ಈ ಕೂಡಲೇ ಗೃಹ ಸಚಿವರಿಗೆ ನಿರ್ದೇಶನ ನೀಡಿ, ಪವರ್ ಟಿವಿ ವಾಹಿನಿ ಲೈವ್ ಬಂದ್ ತೆರವು ಮಾಡಿಸಿ ನ್ಯಾಯ ದೊರಕಿಸಿಕೊಡಬೇಕು ಎಂದು ಸಿಎಂ ಬಿಎಸ್ ಯಡಿಯೂರಪ್ಪಗೆ ಶಿವಾನಂದ್  ತಗಡೂರು ಮನವಿ ಮಾಡಿದ್ದಾರೆ.

Key words: Power TV -channel -clear – live bandh- Shivananda Tagadur – CM BS yeddyurappa