Saturday, September 19, 2026

BDA Apartments

Home Front Page ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ರೂ ಹಿಡಿದು ತರುತ್ತೇವೆ- ಸಿಎಂ ಸಿದ್ದರಾಮಯ್ಯ.

ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ರೂ ಹಿಡಿದು ತರುತ್ತೇವೆ- ಸಿಎಂ ಸಿದ್ದರಾಮಯ್ಯ.

ಬಾಗಲಕೋಟೆ, ಮೇ, 3,2024 (www.justkannada.in): ಲೈಂಗಿಕ ದೌರ್ಜನ್ಯ ಆರೋಪ ಪ್ರಕರಣ ಸಂಬಂಧ ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ರೂ ಹಿಡಿದು ತರುತ್ತೇವೆ  ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಈ ಕುರಿತು ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಪ್ರಜ್ವಲ್​ ರೇವಣ್ಣನ ಪಾಸ್​ಪೋರ್ಟ್  ರದ್ದುಗೊಳಿಸುವಂತೆ ಪ್ರಧಾನಿ ಮೋದಿಯವರಿಗೆ ಪತ್ರ ಬರೆದಿದ್ದೇನೆ. ಪಾಸ್​ಪೋರ್ಟ್​ ರದ್ದತಿ ಅಧಿಕಾರವಿರುವುದು ಕೇಂದ್ರ ಸರ್ಕಾರಕ್ಕೆ ಮಾತ್ರ. ಪಾಸ್ ಪೋರ್ಟ್ ರದ್ದಾದರೇ ಪ್ರಜ್ವಲ್ ರೇವಣ್ಣ ವಿದೇಶದಲ್ಲಿರಲು ಆಗಲ್ಲ. ಮೋದಿ ಅವರು ಪಾಸ್ ಪೋರ್ಟ್ ರದ್ದು ಮಾಡಲಿ ಎಂದು ಸವಾಲು ಹಾಕಿದರು.ಪ್ರಜ್ವಲ್ ರೇವಣ್ಣ ಯಾವ ದೇಶದಲ್ಲಿದ್ರೂ ಹಿಡಿದು ತರುತ್ತೇವೆ siddaramaiah123

ಚುನಾವಣೆ ವೇಳೆ ಪ್ರಜ್ವಲ್ ರೇವಣ್ಣ ನನ್ನ ಮಗ ಎಂದು ಹೆಚ್​ಡಿ ಕುಮಾರಸ್ವಾಮಿ ಹೇಳಿದ್ದರು. ನನ್ನ ಮಗ ನಿಖಿಲ್​ ಬೇರೆ ಅಲ್ಲ, ಪ್ರಜ್ವಲ್ ರೇವಣ್ಣ ಬೇರೆ ಅಲ್ಲ ಅಂದಿದ್ದರು. ಈಗ ಅವರ ಕುಟುಂಬ ಬೇರೆ ನಮ್ಮ ಕುಟುಂಬ ಬೇರೆ ಅಂತಿದ್ದಾರೆ. ಪ್ರಜ್ವಲ್ ಪ್ರಕರಣ ಮೊದಲೇ ಬಿಜೆಪಿಗೂ ಗೊತ್ತಿತ್ತು. ಆದರೂ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡರು. ಈಗ ಯಾಕೆ ಕ್ರಮ ವಹಿಸುತ್ತಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.

Key words: Prajwal Revanna, any, country, CM, Siddaramaiah