ಪ್ರಜ್ವಲ್​ ರೇವಣ್ಣ ಪ್ರಕರಣ ಎಸ್ ಐಟಿ ತನಿಖೆಗೆ: ಯಾರೇ ಇರಲಿ ಕ್ರಮ ಕೈಗೊಳ್ಳುತ್ತೇವೆ- ಗೃಹ ಸಚಿವ ಡಾ.ಜಿ.ಪರಮೇಶ್ವರ್.  

ಬೆಂಗಳೂರು ಏಪ್ರಿಲ್​ 29,2024 (www.justkannada.in):  ಹಾಸನ ಸಂಸದ ಪ್ರಜ್ವಲ್​ ರೇವಣ್ಣ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪಕ್ಕೆ ಸಂಬಂಧಿಸಿದಂತೆ ಎಸ್ ಐಟಿ ರಚನೆ ಮಾಡಿದ್ದೇವೆ  ಯಾರೇ ಇರಲಿ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಗೃಹ ಸಚಿವ ಡಾ.ಜಿ.ಪರಮೇಶ್ವರ್,  ದೂರುದಾರರು ಯಾರ ಹೆಸರು ಉಲ್ಲೇಖಿಸಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದ ತನಿಖೆಯನ್ನು ಎಸ್​ಐಟಿಗೆ ವಹಿಸಿದ್ದೇವೆ. ತನಿಖಾ ತಂಡದಲ್ಲಿ ಎಸ್​ಪಿ ಮಟ್ಟದ ಅಧಿಕಾರಿಗಳು ಇದ್ದಾರೆ. ಎಸ್​​ಐಟಿ ಅಧಿಕಾರಿಗಳ ವರದಿ ಬಂದ ನಂತರ ಕ್ರಮ ಕೈಗೊಳ್ಳಲಾಗುತ್ತೆ. ಅಧಿಕಾರಿಗಳು ಪೆನ್​ಡ್ರೈವ್, ಸಾಕ್ಷಿ ಎಲ್ಲವನ್ನೂ ಕಲೆ ಹಾಕುತ್ತಿದ್ದಾರೆ. ಅಗತ್ಯವಿದ್ದರೇ ವಿದೇಶದಿಂದ ಸಂಸದ ಪ್ರಜ್ವಲ್ ರೇವಣ್ಣ ಅವರನ್ನು ವಾಪಸ್ ಕರೆಸಿಕೊಳ್ಳುತ್ತೇವೆ ಎಂದರು.

ಎಸ್​​ಐಟಿ ಅಧಿಕಾರಿಗಳಿಗೆ ಸಂಪೂರ್ಣ ಸ್ವಾತಂತ್ರ್ಯ ನೀಡಲಾಗಿದೆ. ಎಲ್ಲ ವಿಡಿಯೋಗಳನ್ನು ಎಫ್​ಎಸ್​ಲ್​​ಗೆ ಕಳುಹಿಸುತ್ತೇವೆ. ಸಂತ್ರಸ್ತರಿಗೆ ಭಯ ಹುಟ್ಟಿಸಿದರೇ ಅವರಿಗೆ ನಾವು ಭದ್ರತೆ ನೀಡುತ್ತೇವೆ  ಎಂದು ಪರಮೇಶ್ವರ್  ಹೇಳಿದರು.

Key words: Prajwal Revanna, case, SIT, Dr. G. Parameshwar