ದೇಶಾದ್ಯಂತ ಸ್ವಾತಂತ್ರ್ಯ ಸಂಭ್ರಮ: ಕೆಂಪುಕೋಟೆಯಲ್ಲಿ ಸ್ವಾತಂತ್ರ್ಯೋತ್ಸವ ಆಚರಣೆಗೆ ಭರದ ಸಿದ್ಧತೆ

ಬೆಂಗಳೂರು, ಆಗಸ್ಟ್ 14, 2022 (www.justkannada.in): ದೇಶದ 75ನೇ ಸ್ವಾತಂತ್ರ್ಯೋತ್ಸವ ಆಚರಣೆಗೆ ಭರದ ಸಿದ್ಧತೆಗಳು ನಡೆದಿವೆ. ದೇಶಾದ್ಯಂತ ಸಂಭ್ರಮ ಮುಗಿಲು ಮುಟ್ಟುತ್ತಿದ್ದು, ಎಲ್ಲೆಡೆ ತಿರಂಗಾ ರಾರಾಜಿಸುತ್ತಿದೆ.

ಕೆಂಪುಕೋಟೆಯಲ್ಲಿ ಹಮ್ಮಿಕೊಳ್ಳಲಾದ ಸಮಾರಂಭದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಭಾಷಣ ಮಾಡಲಿದ್ದಾರೆ. ಈ ಸಮಾರಂಭದಲ್ಲಿ 7000 ಮಂದಿ ಅತೀ ಗಣ್ಯ ಅತಿಥಿಗಳು ಆಗಮಿಸುವ ನಿರೀಕ್ಷೆಯಿದೆ.

ಇದೇ ವೇಳೆ, 10ಸಾವಿರ ಪೊಲೀಸರನ್ನು ನಿಯೋಜಿಸಲಾಗಿದ್ದು, ಬಹುಹಂತಗಳ ಭದ್ರತೆಯನ್ನು ಕೈಗೊಳ್ಳಲಾಗಿದೆ.

ಈ ಬಾರಿ ಮುಖ ಗುರುತಿಸುವ ವ್ಯವಸ್ಥೆ (ಎಫ್‌ಆರ್‌ಎಸ್) ಕ್ಯಾಮರಾಗಳನ್ನು ಕೂಡಾ ಕೆಂಪುಕೋಟೆ ಪ್ರವೇಶಿಸುವ ದ್ವಾರದ ಬಳಿ ಸ್ಥಾಪಿಸಲಾಗಿದೆ.

ಇದರ ದಿನದ 24 ಗಂಟೆಗಳ ಕಾಲವೂ ನಿಗಾ ಇಟ್ಟಿದ್ದೇವೆ. ಈ ಬಾರಿ ಅತಿಥಿಗಳ ಸಂಖ್ಯೆ 7000 ಕ್ಕೇರಿದೆ. ಪ್ರವೇಶ ದ್ವಾರದಲ್ಲಿ ಎಫ್‌ಆರ್‌ಎಸ್ ಕ್ಯಾಮರಾಗಳನ್ನು ಸ್ಥಾಪಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದರು.