Thursday, July 30, 2026

BDA Apartments

Home Front Page RSS ನೋಂದಣಿ ವಿಚಾರ: ಮೋಹನ್ ಭಾಗವತ್ ರಿಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

RSS ನೋಂದಣಿ ವಿಚಾರ: ಮೋಹನ್ ಭಾಗವತ್ ರಿಗೆ ಪತ್ರ ಬರೆದ ಗೃಹ ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು, ಜೂನ್, 15,2026 (www.justkannada.in) : ಆರ್ ಎಸ್ ಎಸ್ ನೋಂದಣಿ ವಿಚಾರವಾಗಿ ಆರ್ ಎಸ್ ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಅವರಿ​ಗೆ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರ, ಬರೆದಿದ್ದು  ಕೆಲ ಅಂಶಗಳ ಬಗ್ಗೆ  ವಿವರ ನೀಡುವಂತೆ ಆಗ್ರಹಿಸಿದ್ದಾರೆ.

ಮೋಹನ್ ಭಾಗವತ್  ಅವರಿಗೆ ಪತ್ರ ಬರೆದಿರುವ ಗೃಹ ಸಚಿವ ಪ್ರಿಯಾಂಕ್ ಖರ್ಗೆ, ಸಂಘದ ಕಾರ್ಯಚಟುವಟಿಕೆಗಳು, ಸಂಘಕ್ಕೆ ಬರುವ ಆದಾಯದ ಮೂಲ, ಆಸ್ತಿಪಾಸ್ತಿ ಬಗ್ಗೆ ಬಹಿರಂಗಪಡಿಸುವಂತೆ ತಿಳಿಸಿದ್ದಾರೆ.

ರಾಷ್ಟ್ರೀಯತೆ, ಶಿಸ್ತು ಮತ್ತು ಕರ್ತವ್ಯದ ಕುರಿತು ನಿರಂತರವಾಗಿ ಮಾತನಾಡುವ ಸಂಘಟನೆಯೊಂದು ಪಾರದರ್ಶಕತೆ, ಕಾನೂನಿನ ಅನುಸರಣೆ ಮತ್ತು ಭಾರತದ ಸಂವಿಧಾನದ ಬಗೆಗಿನ ಗೌರವವನ್ನೂ ಅಷ್ಟೇ ದೃಢವಾಗಿ ಪ್ರದರ್ಶಿಸಬೇಕು. ಸಾಮಾನ್ಯ ಭಾರತೀಯರು ನಿಯಮಗಳನ್ನು ಪಾಲಿಸಬೇಕು. ತಾನು ಮಾತ್ರ ಅದೇ ನಿಯಮಗಳಿಂದ ವಿನಾಯಿತಿ ಪಡೆದುಕೊಳ್ಳುವ ನೈತಿಕ ಹಕ್ಕು ಆರ್‌ಎಸ್‌ಎಸ್‌ ಗೆ ಇಲ್ಲ. ಕಾರ್ಮಿಕರು, ಸಣ್ಣ ಸಂಘ-ಸಂಸ್ಥೆಗಳು, ಧಾರ್ಮಿಕ ಸಂಸ್ಥೆಗಳು, ಎನ್‌ ಜಿಒಗಳು, ಟ್ರಸ್ಟ್‌ಗಳು, ಕಂಪನಿಗಳು ಮತ್ತು ನಾಗರಿಕರು ನೋಂದಣಿ, ಬಹಿರಂಗಪಡಿಸುವಿಕೆ, ಲೆಕ್ಕಪರಿಶೋಧನೆ ಮತ್ತು ತೆರಿಗೆ ಪಾವತಿಗೆ ಬದ್ಧರಾಗಿದ್ದಾರೆ. ಆದ್ದರಿಂದ ಆರ್‌ಎಸ್‌ಎಸ್ ಕೂಡ ದೇಶದ ಕಾನೂನಿಗೆ ಮಾದರಿಯಾಗಿ ಬದ್ಧವಾಗಿರಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ತಿಳಿಸಿದ್ದಾರೆ.

ಆರ್‌ಎಸ್‌ಎಸ್ ತನ್ನ ಶತಮಾನೋತ್ಸವದ ಈ ಸಂದರ್ಭವನ್ನು ಕೇವಲ ಆಚರಣೆಗಾಗಿ ಮಾತ್ರವಲ್ಲ. ಸಾಂವಿಧಾನಿಕ ಆತ್ಮಾವಲೋಕನಕ್ಕಾಗಿಯೂ ಬಳಸಿಕೊಳ್ಳಬೇಕೆಂದು ನಾವು ಆಗ್ರಹಿಸುತ್ತೇವೆ.  ಆರ್ ಎಸ್ ಎಸ್  ತನ್ನನ್ನು ತಾನು ನೋಂದಾಯಿಸಿಕೊಳ್ಳುವುದು , ತನ್ನ ಚಟುವಟಿಕೆಗಳು ಮತ್ತು ಆರ್ಥಿಕ ವ್ಯವಹಾರಗಳನ್ನು ಬಹಿರಂಗಪಡಿಸುವುದು. ಅನ್ವಯವಾಗುವ ಎಲ್ಲ ತೆರಿಗೆಗಳನ್ನು ಪಾವತಿಸುವುದು ಮತ್ತು ಭಾರತೀಯ ಕಾನೂನಿನ ಚೌಕಟ್ಟಿನೊಳಗೆ ಪಾರದರ್ಶಕ ಹಾಗೂ ಜವಾಬ್ದಾರಿಯುತ ಸಂಘಟನೆಯಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಿಯಾಂಕ್ ಖರ್ಗೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

Key words: Home Minister, Priyank Kharge writes, RSS,  Mohan Bhagwat