ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಮಸ್ಯೆಗಳೇ ಹೆಚ್ಚು: ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ನಿಮ್ಮ ಜೀವನ ಸುಧಾರಣೆ- ಪ್ರಿಯಾಂಕಾ ಗಾಂಧಿ

ಧಾರವಾಡ,ಏಪ್ರಿಲ್,29,2023(www.justkannada.in):  ಬಿಜೆಪಿ ಸರ್ಕಾರದ ಅವಧಿಯಲ್ಲಿ ರಾಜ್ಯದ ಜನರ ಸಮಸ್ಯೆ ಹೆಚ್ಚಾಗಿದೆ. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಿಮ್ಮ ಜೀವನ ಸುಧಾರಣೆಯಾಗುತ್ತದೆ ಎಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕಾ ಗಾಂಧಿ ಹೇಳಿದರು.

ಕುಂದಗೋಳದಲ್ಲಿ  ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರದಲ್ಲಿ ತೊಡಗಿ ರೋಡ್​ ಶೋ ವೇಳೆ ಮಾತನಾಡಿದ ಪ್ರಿಯಾಂಕಾ ಗಾಂಧಿ,  ರಾಜ್ಯದಲ್ಲಿ ಕಾಂಗ್ರೆಸ್  ಪ್ರತಿ ಮನೆಗೂ ಗ್ಯಾರಂಟಿ ಕಾರ್ಡ್​  ನೀಡಿದ್ದು ಕಾಂಗ್ರೆಸ್ ಅಧಿಕಾರಕ್ಕೆ ಬಂದರೇ ಮನೆಯ ಯಜಮಾನಿಗೆ 2,000 ರೂ. ಕೊಡತ್ತೇವೆ. ಅನ್ನಭಾಗ್ಯ, ಕ್ಷೀರಭಾಗ್ಯ ಯೋಜನೆಯನ್ನು ಮತ್ತೆ ಜಾರಿ ಮಾಡುತ್ತೇವೆ. ಮಹಿಳೆಯರಿಗೆ ಉಚಿತವಾಗಿ ಬಸ್​ ಪಾಸ್ ನೀಡುತ್ತೇವೆ. ನಾವು ಕೊಟ್ಟ ಮಾತನ್ನು ಈಡೇರಿಸುತ್ತೇವೆ. ಈ ಬಾರಿ ಕಾಂಗ್ರೆಸ್ ಅಭ್ಯರ್ಥಿಯನ್ನ ಬೆಂಬಲಿಸಿ ಎಂದು ಮನವಿ ಮಾಡಿದರು.

ಈ ನಾಡಿಗೆ ಬಂದು ನನಗೆ ಖುಷಿ ಆಗುತ್ತಿದೆ. ಬಸವೇಶ್ವರ, ಸವಾಯಿ ಗಂಧರ್ವ ಚನ್ನಮ್ಮನ ನಾಡು ಇದು. ನಾನು ಸಿದ್ಧೇಶ್ವರ ಸ್ವಾಮೀಜಿಗಳಿಗೂ ಶ್ರದ್ಧಾಂಜಲಿ ಅರ್ಪಿಸುತ್ತೇನೆ. ದೇಶದ ಸಾಹಿತ್ಯ, ಕಲೆ, ಸಂಸ್ಕೃತಿಗೆ ಧಾರವಾಡ ಬಹಳ ಕೊಡುಗೆ ಕೊಟ್ಟಿದೆ. ಕೃಷಿ ವಿಷಯದಲ್ಲಿ ಅನ್ಯಾಯಗಳು ಆದಾಗ ಈ ಭಾಗದ ರೈತರು ಹೋರಾಟಗಳನ್ನು ಮಾಡಿದ್ದಾರೆ ಎಂದು ಪ್ರಿಯಾಂಕಾ ಗಾಂಧಿ ಸ್ಮರಿಸಿದರು.

Key words: Problems – BJP –government- Congress -Priyanka Gandhi