ಪ್ರಾಥಮಿಕ ಶಾಲೆಗಳ ಪದವೀಧರ ಶಿಕ್ಷಕರಿಗೆ ಬಡ್ತಿ: ಗುಡ್ ನ್ಯೂಸ್ ನೀಡಿದ ಶಿಕ್ಷಣ ಸಚಿವ ನಾಗೇಶ್

ಬೆಂಗಳೂರು. ನವೆಂಬರ್ 15, 2022 (www.justkannada.in): ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು 6 ರಿಂದ 8 ನೇ ತರಗತಿಗೆ ನಿಯುಕ್ತಿಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದು ಸಚಿವ ಬಿ.ಸಿ.ನಾಗೇಶ್ ಹೇಳಿದ್ದಾರೆ.

ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು 6-8 ನೇ ತರಗತಿಗೆ ನಿಯುಕ್ತಿಗೊಳಿಸಲು ಪರಿಶೀಲನೆ ನಡೆಸಿ ಅಗತ್ಯ ಕ್ರಮ ವಹಿಸಲು ಅಧಿಕಾರಿಗಳಿಗೆ ಸಚಿವ ಬಿ.ಸಿ.ನಾಗೇಶ್ ಸೂಚಿಸಿದ್ದಾರೆ.

ಪ್ರಸ್ತುತ ಪ್ರಗತಿಯಲ್ಲಿರುವ 15 ಸಾವಿರ ಪದವೀಧರ ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ಮುನ್ನ ಈ ಮೇಲಿನ ಕ್ರಮ ಕೈಗೊಳ್ಳುವಂತೆ ಸಚಿವರು ತಿಳಿಸಿದ್ದಾರೆ.

6 ರಿಂದ 8 ನೇ ತರಗತಿಗಳಲ್ಲಿ ಖಾಲಿ ಇರುವ ಪದವೀಧರ ಶಿಕ್ಷಕ ಹುದ್ದೆಗಳ ಪೈಕಿ ಶೇ. 40 ರಷ್ಟು ಸ್ಥಾನಗಳಿಗೆ ಹಾಲಿ ಪ್ರಾಥಮಿಕ ಶಾಲೆಗಳಲ್ಲಿ (1 ರಿಂದ 5) ಕಾರ್ಯನಿರ್ವಹಿಸುತ್ತಿರುವ ಪದವೀಧರ ಶಿಕ್ಷಕರನ್ನು ಸೇವಾ ಜೇಷ್ಠತೆ ಆಧಾರದಲ್ಲಿ ಪರಿಶೀಲಿಸ ಬಡ್ತಿ ನೀಡುವ ಸಂಬಂಧ ಹಣಕಾಸು ಇಲಾಖೆ ಒಪ್ಪಿಗೆ ಸೂಚಿಸಿದೆ.